ಪಿಎಂಶ್ರೀ (ಉರ್ದು)ಶಾಲೆಯ ಸದುಪಯೋಗಪಡಿಸಿಕೊಳ್ಳಿ: ಬಿಇಓ ಯಡ್ರಾಮಿ
Make good use of PMShri (Urdu) School: BEO Yadrami
ದೇವರಹಿಪ್ಪರಗಿ 17: ಸರಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಉತ್ತೇಜನ ನೀಡುವ ಪಿಎಂಶ್ರೀ(ಉರ್ದು) ಯೋಜನೆಗೆ ನಿಮ್ಮ ಶಾಲೆ ಆಯ್ಕೆಯಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಸಹಕಾರಿಯಾಗಿದೆ. ಅದರ ಸದುಪಯೋಗ ಪಡಿಸಿಕೊಳ್ಳಲು ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಕರೆ ನೀಡಿದರು. ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ (ಪಿಎಂ ಶ್ರೀ) ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ದಿನಾಚರಣೆ ಹಾಗೂ ಪಾಲಕ, ಪೋಷಕರ ಮತ್ತು ಶಿಕ್ಷಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದವರು. ಪಿಎಂಶ್ರೀ ತಾಲೂಕಿನಲ್ಲಿ ನಿಮ್ಮ (ಉರ್ದು ವಿಭಾಗದ)ಶಾಲೆ ಆಯ್ಕೆಯಾಗಿದ್ದು, ಇದರಿಂದ ಅತ್ಯಾಧುನಿಕ ಮಾದರಿಯಲ್ಲಿ ಮಕ್ಕಳಿಗೆ ಬೋಧನಾ ಸೌಲಭ್ಯ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೆ?ಶ. ಇದರಿಂದ ನಾನಾ ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ಸಿಗಲಿದೆ. ಪ್ರಾಥಮಿಕ, ಮಾಧ್ಯಮಿಕ ಹಾಗೂ ಕಾಲೇಜ ವಿಭಾಗದಲ್ಲಿ ಮುಂದೆ ವಿದ್ಯಾರ್ಥಿಗಳು ಇಲ್ಲಿ ಕಲಿಯಬಹುದಾಗಿದೆ.
ಆದಕಾರಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ, ಸೌಲಭ್ಯ ಹಾಗೂ ಮಕ್ಕಳ ಸಂಖ್ಯೆ ಹೆಚ್ಚಾಗಲು ಎಲ್ಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಹಾಗೂ ಪಾಲಕರು ಸಹಕರಿಸಬೇಕು ಬರುವಂತ ದಿನಗಳಲ್ಲಿ ಶಾಲಾ ಕೊಠಡಿಗಳ ಹಾಗೂ ಶೌಚಾಲಯಗಳ ಕೊರತೆ ನೀಗಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಶಿಕ್ಷಣ ಸಂಯೋಜಕ ಎಸ್.ಎಂ.ಕಪನಿಂಬರಗಿ, ಸಿ.ಆರಿ್ಪ ಸೋಮೇಶ ಪಾಟೀಲ, ಬಿ.ಆರಿ್ಪ ಪಿ.ಆರ್.ಕಾಚೂರ, ಮುಖ್ಯ ಗುರುಗಳಾದ ಎಂ.ಎ.ಹೆಬ್ಬಾಳ, ಶಿಕ್ಷಕ ಪೀರ್ಜಾದೆ ಸೇರಿದಂತೆ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 