ಸೌಲಭ್ಯಗಳ ಸದ್ಭಳಕೆಯೊಂದಿಗೆ ಪ್ರಗತಿ ಹೊಂದಿ : ರೇಖಾ
Make progress by making good use of facilities: Rekha
ಸೌಲಭ್ಯಗಳ ಸದ್ಭಳಕೆಯೊಂದಿಗೆ ಪ್ರಗತಿ ಹೊಂದಿ : ರೇಖಾ
ಕಂಪ್ಲಿ 15: ಪಟ್ಟಣದ ಕಲ್ಮಠ ಐಟಿಐ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಜೀವನ ರೂಪಿಸುವಲ್ಲಿ ಶಿಕ್ಷಣದ ಮಹತ್ವ ಕುರಿತು ಅರಿವು ಕಾರ್ಯಕ್ರಮ ಬುಧವಾರ ಜರಗಿತು. ತಾಲೂಕು ಸಮನ್ವಯ ಅಧಿಕಾರಿ ರೇಖಾ ಮಾತಾಡಿ, ಸಂಸ್ಥೆಯು ಶೈಕ್ಷಣಿಕ ಹಿತ ಕಾಪಾಡುವ ದೃಷ್ಟಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ವೃತ್ತಿಪರ ಶಿಕ್ಷಣ ಪಡೆಯುತ್ತಿದ್ದರೆ ಶಿಷ್ಯವೇತನ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಬಳಕೆ ಮಾಡಿಕೊಂಡು ಪ್ರಗತಿ ಹೊಂದಬೇಕು ಎಂದರು.ನಂತರ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಎಸ್.ರಾಮಪ್ಪ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳಲ್ಲಿ ಮೌಲ್ಯಗಳು ಕಣ್ಮರೆಯಾಗುತ್ತಿದ್ದು, ಶಿಕ್ಷಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಣ ಮಾನವ ಜೀವನದ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬರು ಶಿಕ್ಷಣವಂತರಾಗಿ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಮತ್ತು ಜೀವನ ನಿರ್ವಹಣೆ ಮೂಲಕ ಪ್ರತಿಯೊಬ್ಬರಿಗೆ ಮಾದರಿಯಾಗಬೇಕು ಎಂದರು. ಈ ಸಂದರ್ಭದಲ್ಲಿ ಉಪನ್ಯಾಸಕ ಅಂಬರೀಶ್, ಶಿಕ್ಷಕರಾದ ಕುಮಾರ್, ಸದಾನಂದ, ಸೇವಾ ಪ್ರತಿನಿಧಿ ವಾಣಿಶ್ರೀ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 