ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ: ಬಂಡವಾಳ ಒದಗಿಸುವ ಪ್ರಸ್ತಾವನೆ ಇಲ್ಲ: ಸಚಿವ ಶಿವಾನಂದ ಎಸ್ ಪಾಟೀಲ್
ಬೆಳಗಾವಿ ಡಿ.13: ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಸರ್ಕಾರದ ವತಿಯಿಂದ ರೂ.50 ಕೋಟಿ ಷೇರು ಬಂಡವಾಳ ಒದಗಿಸುವ ಯಾವುದೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ಸ್ಪಷ್ಟ ಪಡಿಸಿದರು.
ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮೇಲಿಂತೆ ಸಚಿವರು ಉತ್ತರಿಸಿದರು.
ರಾಜ್ಯ ಸರ್ಕಾರ ಸರ್ಕಾರಿ ಸ್ವಾಮ್ಯದ ದಿ ಮೈಸೂರು ಷುಗರ್ ಕಂಪನಿ ಹೊರತು ಪಡಿಸಿ ಯಾವುದೇ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯ ಸರ್ಕಾರದಿಂದ ಷೇರು ಬಂಡವಾಳ ಅಥವಾ ಅನುದಾನ ನೀಡುವ ನೀತಿ ಸರ್ಕಾರದ ಮುಂದೆ ಇರುವುದಿಲ್ಲ. ಮಲಪ್ರಭಾ ಸಕ್ಕರೆ ಕಾರ್ಖಾನೆಯು ಚುನಾಯಿತ ಆಡಳಿತ ಮಂಡಳಿಯನ್ನು ಹೊಂದಿದೆ. ಕಾರ್ಖಾನೆಯ ಕಾರ್ಯನಿರ್ವಹಣೆಗೆ ಅಗತ್ಯವಾದ ಸಂಪನ್ಮೂಲ ಕ್ರೋಢಿಕರಿಸುವುದು ಆಡಳಿತ ಮಂಡಳಿ ಜವಬ್ದಾರಿಯಾಗಿದೆ. ಆರ್ಥಿಕ ಸಂಕಷ್ಟದಿಂದ ಹಾಗೂ ಇತರೆ ಆಡಳಿತಾತ್ಮಕ ಕಾರಣಗಳಿಂದ ಸ್ಥಗಿತಗೊಂಡಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ದೀರ್ಘಾವಧಿಯ ಮೆಲೆ ಖಾಸಗಿಯವರಿಗೆ ಗುತ್ತಿಗೆ ನೀಡಿ ಪುನಶ್ಚೇತನಗೊಳಿಸಬಹುದು. ಈ ಬಗ್ಗೆ ಕಾರ್ಖಾನೆ ಸಾಮಾನ್ಯ ಸಭೆ ಮತ್ತು ಆಡಳಿತ ಮಂಡಳಿ ಸಭೆ ಸೂಕ್ತ ತೀರ್ಮಾನ ಕೈಗೊಂಡು ಪ್ರಸ್ತಾವನೆ ಸಲ್ಲಿಸಿದರೆ ಸರ್ಕಾರ ಪರೀಶೀಲನೆ ನಡೆಸುವುದು ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 