ಮಲಪ್ರಭಾ ಶುಗರ್ಸ್ : ಪುನಶ್ಚೇತನ ಪ್ಯಾನೆಲ್ ಗೆ ಭರ್ಜರಿ ಗೆಲುವು
Malaprabha Sugars: A huge victory for the Punacchetana panel
ಬೆಳಗಾವಿ 29 : ಭಾರೀ ಕುತೂಹಲ ಮೂಡಿಸಿದ್ದ ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ಪುನಶ್ಚೇತನ ಪ್ಯಾನೆಲ್ ಭರ್ಜರಿ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಬಾಬಾಸಾಹೇಬ ಪಾಟೀಲ, ವಿಠ್ಠಲ ಹಲಗೇಕರ್ ನೇತೃತ್ವದ ಪ್ಯಾನೆಲ್ ನಿಂದ ಸ್ಫರ್ಧಿಸಿದ್ದ ಎಲ್ಲ 15 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ವಿರೋಧಿ ಪ್ಯಾನೆಲ್ ಗಳು ಧೂಳಿಪಟವಾಗಿವೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾರ್ಖಾನೆಯ ಎದುರು ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರೈತರು ನಮ್ಮ ಮೇಲೆ ವಿಶ್ವಾಸವಿಟ್ಟು ಅಭೂತಪೂರ್ವ ಗೆಲುವು ನೀಡಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹಾಗೆಯೇ ಎಲ್ಲ ಕಾರ್ಮಿಕರಿಗೂ ಸಹ ಕೃತಜ್ಞತೆ ಸಲ್ಲಿಸುತ್ತೇವೆ. ಅವರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸುತ್ತೇವೆ ಎಂದರು. ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದು ಖಚಿತ. ಎಲ್ಲರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡಲಾಗುವುದು ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 