ಅಧ್ಯಕ್ಷರು ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆ ತಾಲೂಕ ಅಧ್ಯಕ್ಷರಾಗಿ ಮಲ್ಲನಗೌಡ ಪಾಟೀಲ ಆಯ್ಕೆ
Mallanagowda Patil elected as Taluka President of Koppal District Citizens Forum
ಲೋಕದರ್ಶನ ವರದಿ
ಯಲಬುರ್ಗಾ 17: ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆಯ ತಾಲೂಕ ಅಧ್ಯಕ್ಷರಾಗಿ ಅಪರ ಸರಕಾರಿ ವಕೀಲರಾದ ಮಲ್ಲನಗೌಡ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತರಾದ ರವಿಕುಮಾರ ಛಲವಾದಿ ಅವರನ್ನು ನೇಮಕ ಮಾಡಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮಹೇಶಬಾಬು ಸುರ್ವೇ ನೇಮಕ ಮಾಡಿ ಆದೇಶ ಹೋರಡಿಸಿದ್ದಾರೆ. ಜಿಲ್ಲೆಯಾದ್ಯಂತ ನಾಗರಿಕ ವೇದಿಕೆಯ ಸಂಘಟನೆ ಮಾಡುವ ನಿಟ್ಟಿನಲ್ಲಿ ನೇಮಕ ಮಾಡಲಾಗಿದೆ ಎಂದರು.
ನಂತರ ನಮ್ಮ ಪತ್ರಿಕೆ ಜೋತೆ ಮಾತನಾಡಿದ ನೂತನ ಅಧ್ಯಕ್ಷರಾದ ಮಲ್ಲನಗೌಡ್ರ ಪಾಟೀಲ ರಾಜ್ಯಾದ್ಯಂತ ಕನ್ನಡ ನಾಡು ನುಡಿಗಾಗಿ ಸದಾ ಪ್ರತಿಯೊಂದು ಕನ್ನಡ ಕಾರ್ಯಕ್ರಮದಲ್ಲಿ ತನ್ನದೆ ಆದಂತಹ ಕೊಡುಗೆ ನೀಡುತ್ತಿರುವ ಹಾಗೂ ವಿಶೇಷವಾಗಿ ಕೊಪ್ಪಳ ಜಿಲ್ಲಾ ಉತ್ಸವ ಇಟಗಿ ಉತ್ಸವ ಸೇರಿದಂತೆ ಅನೇಕ ಮಹನೀಯರ ಬಗ್ಗೆ ಸದಾ ಒಂದಿಲ್ಲೊಂದು ವಿಶೇಷ ವಿಭಿನ್ನವಾದ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿರುವ ನಮ್ಮ ಕೊಪ್ಪಳ ನಾಗರಿಕ ವೇದಿಕೆಯನ್ನು ಅತ್ಯಂತ ಜನಪ್ರಿಯ ಹಾಗೂ ಪ್ರತಿಯೊಬ್ಬ ಕನ್ನಡದ ಮನಸ್ಸುಗಳು ಒಪ್ಪುವಂತಹ ಕಾರ್ಯಗಳನ್ನು ತಾಲೂಕಿನಲ್ಲಿ ನಿರಂತರವಾಗಿ ಇನ್ನೂ ಮುಂದೆ ಮಾಡಲಾಗುವದು ಎಂದರು.
ಈ ಸಂದರ್ಭದಲ್ಲಿ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶಿವಮೂರ್ತಿ ಇಟಗಿ, ಪತ್ರಕರ್ತರಾದ ಉಮಾಶಂಕರ್ ಹಿರೇಮಠ, ಭೀಮಣ್ಣ ಹವಳಿ, ಸ,ಶರಣಪ್ಪ ಪಾಟೀಲ, ಶಿವಕುಮಾರ ಮ್ಯಾಗೇರಿ, ವಿರೇಶ ಸ್ಟಾಂಪಿನ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.ಕಾರ್ಯದರ್ಶಿ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 