ಕಲಕುಟಗರಗೆ ವಿಜಯಪುರಕ್ಕೆ ಸ್ವಾಗತಿಸಿದ ಮಲ್ಲಿಕಾರ್ಜುನ ಕೆಂಗನಾಳ
Mallikarjuna Kenganal welcomes Kalakutaga to Vijayapura
ಕಲಕುಟಗರಗೆ ವಿಜಯಪುರಕ್ಕೆ ಸ್ವಾಗತಿಸಿದ ಮಲ್ಲಿಕಾರ್ಜುನ ಕೆಂಗನಾಳ
ವಿಜಯಪುರ 06: ಸ್ವಾತಂತ್ರ್ಯ, ಸಮಾನತೆ,ಪ್ರಜಾಪ್ರಭುತ್ವ ಉಳುವಿಗಾಗಿ ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತಕ್ಕಾಗಿ ಬಾಗಲಕೋಟದ ಸಾಮಾಜಿಕ ಹೋರಾಟಗಾರ ನಾಗರಾಜ ಶಿ ಕಲಕುಟಗರ ಅವರು ರಾಜ್ಯದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ವಿಧಾನ ಸಭೆ ಜನ ಜಾಗೃತಿ ಅಭಿಯಾನದ ಅಂಗವಾಗಿ ವಿಜಯಪುರಕ್ಕೆ ಆಗಮಿಸಿದ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹಾಗೂ ವಿವಿಧ ಮುಖಂಡರು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಮುಂದೆ ಹುಮಾಲೆ ಹಾಕಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತ ನೀಡುವುದು ನಮ್ಮ ರೈತ ಭಾರತ ಪಕ್ಷದ ಉದ್ದೇಶವಾಗಿದೆ. ನಾಗರಾಜ ಕಲಕುಟಗರ ಅವರು ಹಮ್ಮಿಕೊಂಡಿರುವ ಸ್ವಚ್ಛ ವಿಧಾನ ಸಭೆ ಅಭಿಯಾನವು ಜನಪರವಾಗಿದ್ದು ಅವರ ಕಾರ್ಯ ಶ್ಲಾಘನೀಯವಾದದ್ದು ಅವರ ಈ ಅಭಿಯಾನಕ್ಕೆ ನಮ್ಮ ರೈತ ಭಾರತ ಪಕ್ಷ ಬೆಂಬಲಿಸುತ್ತದೆ ಎಂದರು.ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಗೀರೀಶ ಕಲಘಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 