ಕಾನಿಪ ಜಿಲ್ಲಾ ಪ್ರಶಸ್ತಿಗೆ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಆಯ್ಕೆ

ಕಾನಿಪ ಜಿಲ್ಲಾ ಪ್ರಶಸ್ತಿಗೆ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಆಯ್ಕೆ Mallikarjuna Pattanashetty selected for Kanipa district award

ದೇವರಹಿಪ್ಪರಗಿ 17: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,ವಿಜಯಪುರ ಜಿಲ್ಲಾ ಘಟಕದ ವತಿಯಿಂದ  ನೀಡಲಾಗುವ 2025-26ನೇಪ್ರತಿಷ್ಠಿತ ಜಿಲ್ಲಾ ಪ್ರಶಸ್ತಿಗೆ ದೇವರಹಿಪ್ಪರಗಿ ಕನ್ನಡ ಪ್ರಭ ಪತ್ರಿಕೆಯ ತಾಲೂಕು ವರದಿಗಾರ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಗಮೇಶ ಉತ್ನಾಳ ತಿಳಿಸಿದ್ದಾರೆ.ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜು.19ರಂದು ಶನಿವಾರ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ, ಸಚಿವ ಶಿವಾನಂದ ಪಾಟೀಲ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅಶೋಕ ಮನಗೂಳಿ,ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಸೇರಿದಂತೆ ಜಿಲ್ಲೆಯ ಶಾಸಕರು, ಸಂಘದ ರಾಜ್ಯ, ಜಿಲ್ಲೆಯ ಅಧ್ಯಕ್ಷರು,ಹಿರಿಯ ಪತ್ರಕರ್ತರು ಅಧಿಕಾರಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.ಸುಮಾರು 6ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ವಿಶೇಷ ವರದಿಗಳ ಮೂಲಕ ತಾಲೂಕಿನ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಬೆಳಕು ಚೆಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ