ಬಂಗಾಳದ ಅಭಿವೃದ್ಧಿಗೆ ಮಮತಾ ಬ್ಯಾನರ್ಜಿ ಅಡ್ಡಿ: ಪ್ರಧಾನಿ ಮೋದಿ ಆರೋಪ
ಸಿಲಿಗುರಿ, ಏ 3 ತೃಣಮೂಲ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಡ್ಡಿಯಾಗಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.
ಉತ್ತರ ಬಂಗಾಳದ ಮಮ್ಮೂತ್ ನಲ್ಲಿ ಏರ್ಪಡಿಸಿದ್ದ ಸಾರ್ಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿ ವಿಷಯದಲ್ಲಿ ಪಶ್ಚಿಮ ಬಂಗಾಳ ಇತರ ರಾಜ್ಯಗಳಿಗಿಂತ ಬಹಳ ಹಿಂದೆ ಉಳಿದಿದೆ. ಈ ರಾಜ್ಯದಲ್ಲಿ ಅಭಿವೃದ್ಧಿ ಕೈಗೊಳ್ಳಲು ಅಡ್ಡಿಯಾಗಿರುವ ಈ "ತಡೆ"ಯನ್ನು ತೆಗೆದು ಹಾಕಲು ನಾನು ಕಾಯುತ್ತಿದ್ದೇನೆ ಎಂದು ಮೋದಿ ಹೇಳಿದರು.
ಚಿಟ್ ಫಂಡ್ ಮೂಲಕ ತೃಣಮೂಲ ಕಾಂಗ್ರೆಸ್ ಬಡವರ ಹಣವನ್ನು ಲೂಟಿ ಮಾಡಿತು ಎಂದು ಆರೋಪಿಸಿದ ಅವರು, ಮಮತಾ ಬ್ಯಾನಜರ್ಿ ಅವರ ದೋಣಿ ಮುಳುಗುತ್ತಿದೆ ಎಂದು ವ್ಯಂಗ್ಯವಾಡಿದರು.
ರಾಜ್ಯದ 70 ಲಕ್ಷ ರೈತರ ಅಭಿವೃದ್ಧಿಗೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅಡ್ಡಿಯಾಗಿದೆ. ಕಮ್ಯುನಿಸ್ಟರು ಮತ್ತು ತೃಣಮೂಲ ಕಾಂಗ್ರೆಸ್ನವರು ಒಂದೇ ದೋಣಿಯಲ್ಲಿದ್ದಾರೆ. ಇಂದು ಇಲ್ಲಿ ಸೇರಿರುವ ಜನಸ್ತೋಮವನ್ನು ಕಂಡು ಮುಖ್ಯಮಂತ್ರಿಯವರ ನಿದ್ರಾಭಂಗವಾಗಲಿದೆ ಎಂದು ಮೋದಿ ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 