ಬಂಗಾಳದ ಅಭಿವೃದ್ಧಿಗೆ ಮಮತಾ ಬ್ಯಾನರ್ಜಿ ಅಡ್ಡಿ: ಪ್ರಧಾನಿ ಮೋದಿ ಆರೋಪ
ಸಿಲಿಗುರಿ, ಏ 3 ತೃಣಮೂಲ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಡ್ಡಿಯಾಗಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.
ಉತ್ತರ ಬಂಗಾಳದ ಮಮ್ಮೂತ್ ನಲ್ಲಿ ಏರ್ಪಡಿಸಿದ್ದ ಸಾರ್ಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿ ವಿಷಯದಲ್ಲಿ ಪಶ್ಚಿಮ ಬಂಗಾಳ ಇತರ ರಾಜ್ಯಗಳಿಗಿಂತ ಬಹಳ ಹಿಂದೆ ಉಳಿದಿದೆ. ಈ ರಾಜ್ಯದಲ್ಲಿ ಅಭಿವೃದ್ಧಿ ಕೈಗೊಳ್ಳಲು ಅಡ್ಡಿಯಾಗಿರುವ ಈ "ತಡೆ"ಯನ್ನು ತೆಗೆದು ಹಾಕಲು ನಾನು ಕಾಯುತ್ತಿದ್ದೇನೆ ಎಂದು ಮೋದಿ ಹೇಳಿದರು.
ಚಿಟ್ ಫಂಡ್ ಮೂಲಕ ತೃಣಮೂಲ ಕಾಂಗ್ರೆಸ್ ಬಡವರ ಹಣವನ್ನು ಲೂಟಿ ಮಾಡಿತು ಎಂದು ಆರೋಪಿಸಿದ ಅವರು, ಮಮತಾ ಬ್ಯಾನಜರ್ಿ ಅವರ ದೋಣಿ ಮುಳುಗುತ್ತಿದೆ ಎಂದು ವ್ಯಂಗ್ಯವಾಡಿದರು.
ರಾಜ್ಯದ 70 ಲಕ್ಷ ರೈತರ ಅಭಿವೃದ್ಧಿಗೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅಡ್ಡಿಯಾಗಿದೆ. ಕಮ್ಯುನಿಸ್ಟರು ಮತ್ತು ತೃಣಮೂಲ ಕಾಂಗ್ರೆಸ್ನವರು ಒಂದೇ ದೋಣಿಯಲ್ಲಿದ್ದಾರೆ. ಇಂದು ಇಲ್ಲಿ ಸೇರಿರುವ ಜನಸ್ತೋಮವನ್ನು ಕಂಡು ಮುಖ್ಯಮಂತ್ರಿಯವರ ನಿದ್ರಾಭಂಗವಾಗಲಿದೆ ಎಂದು ಮೋದಿ ಹೇಳಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 