ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳದ ಮಮತಾ ಬ್ಯಾನರ್ಜಿ
ಕೋಲ್ಕತಾ, ಜ 12: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಪಾಲ್ಗೊಂಡಿದ್ದ ಕೋಲ್ಕತಾ ಪೋರ್ಟ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರುಹಾಜರಾಗಿದ್ದರು. ಪ್ರಧಾನಿ ಮೋದಿ ಅವರೊಂದಿಗೆ, ಮಮತಾ ಬ್ಯಾನರ್ಜಿ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂಬ ಪ್ರಚಾರ ನಡೆಯಿತಾದರೂ, ಕೊನೆಗೆ ಮಮತಾ ಬ್ಯಾನರ್ಜಿ ಕಾರ್ಯಕ್ರಮದಿಂದ ದೂರವೇ ಉಳಿದರು. ರಾಜ್ಯಪಾಲ ಜಗದೀಪ್ ಧಂಕರ್ ಮಾತ್ರ ಮೋದಿಯವರ ಜತೆ ವೇದಿಕೆ ಹಂಚಿಕೊಂಡರು.
ಎರಡು ದಿನಗಳ ಕೊಲ್ಕತ್ತಾ ಭೇಟಿಯ ಭಾಗವಾಗಿ ಭಾನುವಾರ ಬೆಳಿಗ್ಗೆ ಬೇಲೂರು ಮಠದಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿಂದ ನೇರವಾಗಿ ನೇತಾಜಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕಾತ್ತಾ ಪೋರ್ಟ್ ಟ್ರಸ್ಟ್ 150ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡರು.
ಶನಿವಾರ ಕೋಲ್ಕತ್ತಾಗೆ ಆಗಮಿಸಿದ ಮೋದಿ ಅವರನ್ನು ಗೌರವ ಪೂರ್ವಕವಾಗಿ ಮಮತಾ ಬ್ಯಾನರ್ಜಿ ಭೇಟಿಯಾದರು. ಸಿಎಎ ಹಿಂತೆಗೆದುಕೊಳ್ಳಬೇಕು,ಎನ್ಪಿಆರ್ ಮತ್ತು ಎನ್ಆರ್ಸಿ ಕೈಗೆತ್ತಿಕೊಳ್ಳಬಾರದು. ಬಂಗಾಳದ ಜನರು ಇವುಗಳನ್ನು ವಿರೋಧಿಸುತ್ತಿದ್ದಾರೆ ಎಂದು ಮೋದಿ ಗಮನಕ್ಕೆ ತಂದರು. ಆದರೆ ಪ್ರದಾನಿ ಈ ವಿಷಯಗಳಿಗೆ ನೇರ ಉತ್ತರವನ್ನು ನೀಡದೆ ಸಮಯ ಬಂದಾಗ ಮಾತನಾಡುವುದಾಗಿ ಉತ್ತರಿಸಿದರು. ಮೋದಿಯನ್ನು ಭೇಟಿಯಾದ ನಂತರವೇ ಮಮತಾ ಬ್ಯಾನರ್ಜಿ ಕೂಡಲೇ ಸಿಎಎ ವಿರೋಧಿ ಧರಣಿಯಲ್ಲಿ ಭಾಗವಹಿಸಿದರು. ಏತನ್ಮಧ್ಯೆ, ಶನಿವಾರದಂತೆಯೇ ಭಾನುವಾರ ಕೋಲ್ಕತ್ತಾದಲ್ಲಿ ಸಿಎಎ ವಿರೋಧಿ "ಮೋದಿ ಗೋ ಬ್ಯಾಕ್" ಪ್ರತಿಭಟನೆಗಳು ಮುಂದುವರೆದಿದ್ದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 