ಡಾರ್ಜಿಲಿಂಗ್ ನಲ್ಲಿ ಸಿಎಎ ಪ್ರತಿಭಟನೆಗೆ ಮಮತಾ ನೇತೃತ್ವ
ಕೋಲ್ಕತಾ, ಜ 22 : ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ವಿರೋಧಿಸಿ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನಲ್ಲಿ ನಡೆಯಲಿರುವ ಪ್ರತಿಭಟನೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ ವಹಿಸಲಿದ್ದಾರೆ.
ಕಳೆದ ಕೆಲ ವಾರಗಳಿಂದ ಮಮತಾ ಬ್ಯಾನರ್ಜಿ ಅವರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಕೋಲ್ಕತಾದಲ್ಲಿ ಅವರ ನೇತೃತ್ವದ ಹಲವು ಪ್ರತಿಭಟನೆಗಳೂ ನಡೆದಿವೆ.
ತೃಣಮೂಲ ಚಾತ್ರ ಪರಿಷತ್ ಹಾಗೂ ತೃಣಮೂಲ ಮಹಿಳಾ ಕಾಂಗ್ರೆಸ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿವೆ.
ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರ ಕರೆದಿದ್ದ ಎನ್ ಪಿಆರ್ ಕುರಿತ ಸಭೆಯನ್ನು ಬಹಿಷ್ಕರಿಸುವ ಏಕೈಕ ರಾಜ್ಯವಾಗಿದೆ.
ಇತ್ತೀಚೆಗೆ ಉತ್ತರಬಂಗ ಉತ್ಸವದ ಉದ್ಘಾಟನೆ ಸಂದರ್ಭದಲ್ಲಿ ಮಮತಾ, ಬಂಗಾಳದಲ್ಲಿ ಎನ್ ಪಿ ಆರ್ ಅಥವಾ ಸಿಎಎ ಜಾರಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದೇಶದ 365 ದಿನಗಳ ಕಾಲವೂ ರಾಜ್ಯದ ಜನತೆಯನ್ನು ರಕ್ಷಿಸುವ ಭರವಸೆಯನ್ನು ಮಮತಾ ನೀಡಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 