ಏಕ ಕಾಲಕ್ಕೆ ಪುರುಷ, ಮಹಿಳೆ ಕಾಣೆ : ದೂರು ದಾಖಲು
Man, woman missing at same time: Complaint filed
ಕಾರವಾರ, 31 ; ಮುಂಡಗೋಡದ ದೀಪಕ (35 ವರ್ಷ) ಎಂಬ ಯುವಕ 10 ಮೇ 2025 ರಂದು ಬೆಳಗ್ಗೆ 7 ಗಂಟೆಗೆ ಸುಮಾರಿಗೆ ಕಾರವಾರದಲ್ಲಿ ಕೆಲಸ ಇದೆ ಹೋಗುತ್ತೇನೆ ಅಂತಾ ಹೇಳಿ ಹೋದನು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುವ ಪ್ರಕರಣ ದಾಖಲಾಗಿದೆ. ಹಾಗೂ ಮುಂಡಗೋಡದ ಹಳೂರು ಮಾರಿಕಾಂಬಾ ದೇವಸ್ಥಾನದ ಹತ್ತಿರ ನಿವಾಸಿಯಾದ ಆರತಿ (33 ವರ್ಷ) ಎಂಬಾಕೆ ದೀಪಕ ನೊಂದಿಗೆ ಹೋಗಿ, ಕಾಣೆಯಾಗಿರುವ ಬಗ್ಗೆ ದೂರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ಇಂತಿದೆ. ದುಂಡನೆ ಮುಖ, ಸದೃಢವಾದ ಮೈಕಟ್ಟು, ಗೋಧಿ ಮೈ ಬಣ್ಣ, 5.4 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾನೆ. ನೇರಳೆ ಬಣ್ಣದ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ .ಕಾಣೆಯಾದ ಮಹಿಳೆಯ ಚಹರೆ ಇಂತಿದೆ . ದುಂಡನೆ ಮುಖ, ಸದೃಢವಾದ ಮೈಕಟ್ಟು, ಗೋಧಿ ಮೈ ಬಣ್ಣ, 5.4 ಅಡಿ ಎತ್ತರ ಕನ್ನಡ ಭಾಷೆ ಮಾತನಾಡುತ್ತಾಳೆ ಕಪ್ಪು-ನೀಲಿ ಬಣ್ಣದ ಚೂಡಿದಾರ, ಕ್ರೀಮ ಬಣ್ಣ ಪ್ಯಾಂಟ್ ಧರಿಸಿರುತ್ತಾಳೆ.ಇವರು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಪೊಲೀಸ್ ಕಂಟ್ರೋಲ್ ರೂಮ್ ಕಾರವಾರ ದೂ.ಸಂ:08382-226550, ಮುಂಡಗೋಡ ಪೊಲೀಸ್ ಠಾಣೆ ದೂ.ಸಂಖ್ಯೆ: 08301-222211, ಪಿ.ಐ ಮುಂಡಗೋಡ ದೂ.ಸಂ 9480805258 ಹಾಗೂ ಪಿ.ಎಸ್.ಐ ಮುಂಡಗೋಡ ದೂ. ಸಂಖ್ಯೆ 9480805275 ನ್ನು ಸಂಪರ್ಕಿಸುವಂತೆ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನೀರೀಕ್ಷಕರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 