ಮಣ್ಣಿನಡಿ ಸಿಲುಕಿ ಮೃತ: ಶಾಸಕರಿಂದ 2ಲಕ್ಷ ಪರಿಹಾರ
Man dies after being trapped under mud: MLA offers Rs 2 lakh compensation
ಹಾನಗಲ್ 29: ತಡೆಗೋಡೆ ನಿರ್ಮಿಸಲು ಪಾಯ ತೆಗೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕರೊಬ್ಬರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ. 2 ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.
ಕೊಡಗು ಜಿಲ್ಲೆಯ ಮಡಿಕೇರಿಯ ಸ್ಟುವರ್ಟ್ ಹಿಲ್ ಎಂಬ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸುವ ಉದ್ದೇಶದಿಂದ ಪಾಯ ಅಗೆಯುತ್ತಿದ್ದ ಸಂದರ್ಭದಲ್ಲಿ ತಾಲೂಕಿನ ಶೃಂಗೇರಿ ಗ್ರಾಮದ ಆನಂದ ಮಲಗುಂದ ಎಂಬ ಕಾರ್ಮಿಕ ಮಣ್ಣು ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು. ಮೂಲತಃ ಹಾನಗಲ್ ತಾಲೂಕಿನ ಶೃಂಗೇರಿ ಗ್ರಾಮದ ಕಾರ್ಮಿಕ ಆನಂದ ಮಲಗುಂದ ಕೆಲಸ ಅರಸಿ ಮಡಿಕೇರಿಗೆ ತೆರಳಿದ್ದರು. ಅಲ್ಲಿ ದುರ್ಘಟನೆ ಸಂಭವಿಸಿ ಮೃತಪಟ್ಟಿದ್ದರು.ಮೃತ ಕಾರ್ಮಿಕನ ತಾಯಿ ಹಿರಗವ್ವ ಬಸಪ್ಪ ಮಲಗುಂದ ಅವರಿಗೆ ಶಾಸಕ ಮಾನೆ ಪರಿಹಾರದ ಚೆಕ್ ಹಸ್ತಾಂತರಿಸಿದರು. ತಹಶೀಲ್ದಾರ್ ರೇಣುಕಾ ಎಸ್. ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 