ಕೃಷ್ಣಾ ನದಿಗೆ ಬಿದ್ದು ವ್ಯಕ್ತಿ ಸಾವು
Man dies after falling into Krishna river
ಲೋಕದರ್ಶನ ವರದಿ
ಜಮಖಂಡಿ 03: ತಾಲೂಕಿನ ಜಂಬಗಿ ಗ್ರಾಮದ ಕೃಷ್ಣಾ ನದಿಯಲ್ಲಿ ವ್ಯಕ್ತಿಯೊರ್ವನು ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಜಮಖಂಡಿ ನಗರದ ಜಯನಗರ ಕಾಲೋನಿಯ ನಿವಾಸಿ ಶೇರಾಅಲ್ಲಿ ಮುಲ್ಲಾ ನದಿಯಲ್ಲಿ ಮುಳುಗಿ ಸಾವನ್ನಪಿದ್ದ ವ್ಯಕ್ತಿ. ಸೇಂಟ್ರಿಂಗ್ ಕಾಮಗಾರಿ ಕೆಲಸವನ್ನು ಮಾಡುತ್ತಿದ್ದ ಎಂದು ಗುರುತಿಸಲಾಗಿದ್ದು. ಜಂಬಗಿ ಸೇತುವೆಯ ಕೃಷ್ಣಾ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಸಾವಳಗಿ ಹಾಗೂ ಜಮಖಂಡಿ ಗ್ರಾಮೀಣ ಪೋಲಿಸರು ಭೇಟಿ ನೀಡಿ ಶವವನ್ನು ನದಿಯಿಂದ ಮೇಲಕ್ಕೆತ್ತು ಕಾರ್ಯಕ್ಕೆ ಮುಂದಾದ ಬಳಿಕ. ಶವ ಪತ್ತೆಗಾಗಿ ಗ್ರಾಮಸ್ಥರ ಬಗ್ಗೆ ಮಾಹಿತಿ ತಿಳಿದುಕೊಳುವಷ್ಟರಲ್ಲಿ ಸಾವನ್ನಪ್ಪಿರುವ ವ್ಯಕ್ತಿಯ ಪುತ್ರ ಸ್ಥಳಕ್ಕೆ ಬಂದು ನಮ್ಮ ತಂದೆಯ ಶವ ಎಂದು ಪೋಲಿಸರಿಗೆ ಮಾಹಿತಿಯನ್ನು ನೀಡಿದ್ದಾನೆ.
ಈ ಕುರಿತು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ. ಇನ್ನೂ ಯಾವ ಕಾರಣಕ್ಕಾಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂಬುವುದು ಪೋಲಿಸರಿಂದ ನಿಖರವಾದ ಮಾಹಿತಿ ದೊರೆಯಬೇಕಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 