ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಕಡ್ಡಾಯ ಮತದಾನ ಅಗತ್ಯ: ಪಿ.ಮುನಿಯಪ್ಪ
ಲೋಕದರ್ಶನವರದಿ
ರಾಣೇಬೆನ್ನೂರು೨೮: ಸದೃಡ ಪ್ರಜಾಪ್ರಭುತ್ವ ನಿಮರ್ಾಣಗೊಳ್ಳಲು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡವುದು ಹಾಗೂ ಮತದಾರರ ಪಟ್ಟಿಯನ್ನು ಪರಿಶೀಲನೆ ಮಾಡಿಕೊಳ್ಳುವುದು ಇಂದಿನ ಬಹು ಅಗತ್ಯ ಮತ್ತು ಅವಶ್ಯಕವಾಗಿದೆ ಎಂದು ಸದ್ಗುರು ಶಿವಾನಂದ ಪಪೂ ಕಾಲೇಜು ಪ್ರಾಚಾರ್ಯ ಪಿ. ಮುನಿಯಪ್ಪ ಹೇಳಿದರು.
ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಆಯೋಜಿಸಿದ್ದ, ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಮತ್ತು ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ-ತಮ್ಮ ನೆರೆಹೊರೆ ಮತ್ತು ಮನೆಯವರ ಮತದಾರರ ಪಟ್ಟಿಯ ಪರಿಶೀಲನೆ ಮಾಡಿಕೊಳ್ಳಬೇಕು.
ಮತ್ತು ತಮ್ಮಲ್ಲಿರುವ ಆಂತರಿಕ ಶಕ್ತಿಯ ಶ್ರಮ, ವಿದ್ಯೆ, ಬುದ್ಧಿ ಜ್ಞಾನ ಕೌಶಲ್ಯ ಆರ್ಥಿಕ ಸೌಲಭ್ಯಗಳು ಸಮಾಜದ ರಾಷ್ಟ್ರದ ಒಳಿತಿಗಾಗಿ ಯಾವುದೇ ಪ್ರತಿ ಫಲಾಪೇಕ್ಷೆಯಿಲ್ಲದೆ ಸಮರ್ಪಣಾ ಮನೋಭಾವದಿಂದ ಸಹಾಯಹಸ್ತ ನೀಡುವುದರ ಮೂಲಕ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅತಿಥಿಗಳಾಗಿ ಪಾಲ್ಗೊಂಡಿದ್ದ, ಮೊಟೇಬೆನ್ನೂರು ಸರಕಾರಿ ಪ. ಪೂ ಕಾಲೇಜಿನ ಉಪನ್ಯಾಸಕ ಕೆ ಪಿ ಬ್ಯಾಡಗಿ, ರಾಣೇಬೆನ್ನೂರು ಸಕರ್ಾರಿ ಪದವಿ ಕಾಲೇಜಿನ ಪ್ರೊ|| ಅರುಣ್ಕುಮಾರ್ ಚಂದನ್ ಅವರು, ಸಮಾಜದಲ್ಲಿ ಸಮಾನತೆ ಸಾಧಿಸಲು ವಿದ್ಯಾಥರ್ಿಗಳ ಪಾತ್ರ ವಿಷಯ ಕುರಿತಂತೆ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಯೋಜನಾಧಿಕಾರಿ ಹೆಚ್. ಶಿವಾನಂದ, ಉಪನ್ಯಾಸಕರಾದ ಎಮ್. ಶಿವಕುಮಾರ, ಹನುಮಂತಪ್ಪ ಬಿ, ಸುಮಾ ಗಂಗಾಯಿಕೊಪ್ಪ, ಶಕ್ತಿ ಎಸ್. ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 