ಮಂಕುತಿಮ್ಮನ ಕಗ್ಗವು ಮಾನವನ ಜೀವನ, ಆದರ್ಶಗಳ ಗಣಿ: ಪ್ರೊ. ಪರಡ್ಡಿ
Mankuthimman's rope is a mine of human life and ideals: Prof. Paradi
ಮಂಕುತಿಮ್ಮನ ಕಗ್ಗವು ಮಾನವನ ಜೀವನ, ಆದರ್ಶಗಳ ಗಣಿ: ಪ್ರೊ. ಪರಡ್ಡಿ
ಬಾಗಲಕೋಟೆ 8: ಮಂಕುತಿಮ್ಮನ ಕಗ್ಗವು ಪ್ರಸ್ತುತ ದಿನಗಳಲ್ಲಿ ಮಾನವನ ಜೀವನ ಮತ್ತು ಆದರ್ಶಗಳ ಗಣಿಯಾಗಿದೆ ಅಲ್ಲದೆ ಇದು ಮನುಷ್ಯನ ಬದುಕಿನ ಚಿತ್ರಣವನ್ನು ಹಾಗೂ ಮನುಷ್ಯ ಹೇಗೆ ಬದುಕಬೇಕು ಎಂಬ ಚಿಂತನೆಯನ್ನು ತಿಳಿಸುತ್ತದೆ ಎಂದು ಪ್ರಾಧ್ಯಾಪಕರು ಹಾಗೂ ಚಿಂತಕ ಪ್ರೊ ವಿ ಆರ್ ಪರಡ್ಡಿ ಅವರು ತಿಳಿಸಿದರು.
ಅವರು ಇಂದು ಇಲ್ಲಿನ ಬಸವೇಶ್ವರ ಕಲಾ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಐ ಕ್ಯೂ ಏ ಸಿ ವಿಭಾಗದ ಆಶ್ರಯದಲ್ಲಿ ಏರಿ್ಡಸಿದ್ದ ಮಂಕುತಿಮ್ಮನ ಕಗ್ಗ ವಾಚನ ಮತ್ತು ವ್ಯಾಖ್ಯಾನ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪರಿಸರದಲ್ಲಿರುವ ಎಲ್ಲಾ ಪ್ರಾಣಿ ಪಕ್ಷಿಗಳು ಮೌನದಿಂದ ತಮ್ಮ ಕಾರ್ಯವನ್ನು ಹಾಗೂ ಕೆಲಸವನ್ನು ಮಾಡಿ ಮುಗಿಸುತ್ತವೆ. ಆದರೆ ಮನುಷ್ಯ ಮಾತ್ರ ಮೌನವನ್ನು ಮುರಿದು ಮಾತಿನ ಮೂಲಕ ಜೀವನವನ್ನು ಸಾಗಿಸುವ ಪ್ರಯತ್ನ ಮಾಡುತ್ತಾನೆ ಈ ವಿಚಾರವು ಕಗ್ಗದಲ್ಲಿ ಪ್ರಮುಖವಾಗಿದೆ ಎಂದು ಅವರು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯರಾದ, ಪ್ರೊ ಎಸ್ ಆರ್ ಮೂಗನೂರುಮಠ ಅವರು ಮಾತನಾಡುತ್ತಾ ಡಿ ವಿ ಗುಂಡಪ್ಪನವರು ಓದಿದ್ದು ಕೇವಲ ಎಸ್ಎಸ್ಎಲ್ಸಿ ಅವರು ಮಂಕುತಿಮ್ಮನ ಕಗ್ಗ ಮತ್ತು ಮರುಳ ತಿಮ್ಮನ ಕಗ್ಗ ಎಂಬ ಎರಡು ವಿಶೇಷ ಗ್ರಂಥಗಳನ್ನು ಕನ್ನಡ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಐಕ್ಯೂಏಸಿ ಸಂಯೋಜಕ ಡಾ.ಅಪ್ಪು ರಾಥೋಡ್ ಅವರು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ ಆರ್ ನಾಗರಾಜು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಎಸ್ ಡಿ ಕೆಂಗಲಗುತ್ತಿ ಅವರು ಸ್ವಾಗತಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ ಎನ್ ಬಿ ವಿರುಪಾಕ್ಷಿ ಅವರು ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 