ನೊಬೆಲ್ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಅಭಿಜಿತ್ ಬ್ಯಾನರ್ಜಿಗೆ ಮನಮೋಹನ್ ಸಿಂಗ್ ಅಭಿನಂದನೆ
ನವದೆಹಲಿ ಅ, 16: ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿರುವ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿಯವರನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಭಿನಂದಿಸಿದ್ದಾರೆ.
ಬಡತನ ನಿರ್ಮೂಲನೆ ಮತ್ತು ಹೊಸ ಆಯಾಮದ ಅಭಿವೃದ್ಧಿ ಕುರಿತ ಅವರ ಕೃತಿಗಳು ನಿಜಕ್ಕೂ ಮಾರ್ಗದರ್ಶಿ ಎಂದು ಬಣ್ಣಿಸಿದ್ದಾರೆ.
ಅಭಿವೃದ್ಧಿ ಅರ್ಥಶಾಸ್ತ್ರದಲ್ಲಿ ಬ್ಯಾನರ್ಜಿಯವರ ಅನುಶೋಧನೆಗಳು ಭಾರತದಂತಹ ಅಭಿವೃದ್ಧಿಶೀಲ ದೇಶಗಳ ನೀತಿ ರೂಪಿಸಲು ಬಹಳ ಉಪಯುಕ್ತ ಮತ್ತು ಪ್ರಯೋಜನಕಾರಿ ಎಂದುಅವರು ಅಭಿಪ್ರಾಯಪಟ್ಟಿದ್ದಾರೆ.
ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಗೆ ಭಾಜನರಾದ ಭಾರತೀಯ ಮೂಲದ ಎರಡನೇ ವ್ಯಕ್ತಿ ಎನ್ನುವುದು ಹೆಮ್ಮೆಯ ವಿಷಯ ಎಂದು ಬ್ಯಾನರ್ಜಿಯವರಿಗೆ ಬರೆದ ಪತ್ರದಲ್ಲಿ ಮನಮೋಹನ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಅರ್ಥಶಾಸ್ತ್ರದ ವಿದ್ಯಾರ್ಥಿಯಾಗಿ, ಭಾರತದಂಥ ಅಭಿವೃದ್ಧಿಶೀಲ ದೇಶಗಳ ನೀತಿ ರೂಪಿಸಲು ಅನ್ವಯಿಸಬಹುದಾದ ಮತ್ತು ಉಪಯುಕ್ತ ಅಭಿವೃದ್ಧಿ ಅರ್ಥಶಾಸ್ತ್ರದ ಅನುಶೋಧನೆಯನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿರುವುದು ತಮಗೆ ಸಂತಸ ತಂದಿದೆ ಎಂದು ಸಂದೇಶದಲ್ಲಿ ಹೇಳಿದ್ದಾರೆ. ಇದಕ್ಕೂ ಮುನ್ನ ಅಮತ್ರ್ಯಸೇನ್ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಗೆ ಭಾಜನರಾದ ಮೊದಲ ಭಾರತೀಯರಾಗಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 