ಮಾನಸ ಸರೋವರ: 104 ಭಾರತೀಯರ ರಕ್ಷಣೆ
ಕಠ್ಮಂಡು; ಕಳೆದ 4 ದಿನಗಳಿಂದ ನೇಪಾಳ ಬಳಿಯ ಸಿಮಿಕೋಟ್ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಮಂಜಿನ ಹೊಡೆತದಿಂದ ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ಭಾರತೀಯ ಪೈಕಿ 104 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಸಿಮಿಕೋಟ್ನಿಂದ 104 ಭಾರತೀಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
3,600 ಮೀಟರ್ ಎತ್ತರ ಹಿಲ್ಸಾದಲ್ಲಿ ಸಿಲುಕಿಕೊಂಡಿರುವ ಯಾತ್ರಿಕರನ್ನು ರಕ್ಷಣೆ ಮಾಡಲು ಯತ್ನಗಳನ್ನು ನಡೆಸುತ್ತಿದ್ದೇವೆ. ನೇಪಾಳ ಸಕರ್ಾರದ 11 ಹೆಲಿಕಾಪ್ಟರ್ ಗಳೂ ಕೂಡ ಕಾಯರ್ಾಚರಣೆ ನಡೆಸುತ್ತಿವೆ. ಕೆಲ ಖಾಸಗಿ ಕಂಪನಿಗಳ ಹೆಲಿಕಾಪ್ಟರ್ ಗಳೂ ಕಾಯರ್ಾಚರಣೆ ನಡೆಸುತ್ತಿವೆ ಎಂದು ನೇಪಾಳದಲ್ಲಿರುವ ಭಾರತೀಯ ರಾಯಭಾರಿ ಬಿ.ಕೆ.ರೆಗ್ಮಿಯವರು ಹೇಳಿದ್ದಾರೆ.
ಸಿಮಿಕೋಟ್ಗೆ 2 ವಿಮಾನಗಳು ಆಗಮಿಸಿದ್ದು, ಸಂಕಷ್ಟದಲ್ಲಿರುವ 525 ಯಾತ್ರಾಥರ್ಿಗಳನ್ನು ರಕ್ಷಣೆ ಮಾಡುತ್ತಿವೆ ಎಂದು ವರದಿಗಳು ತಿಳಿಸಿವೆ.
ಯಾತ್ರೆಗೆ ತೆರಳಿದ್ದ ಕನ್ನಡಿಗರು ಸುರಕ್ಷಿತ
ಕೈಲಾಸ ಮಾನಸ ಸರೋವರ ಯಾತ್ರೆಗೆ ರಾಜ್ಯದಿಂದ ಕರೆದುಕೊಂಡು ಹೋಗಿದ್ದ 230 ಜನರು ಸುರಕ್ಷಿತವಾಗಿದ್ದಾರೆಂದು ಶಂಕರ ಟ್ರಾವೆಲ್ಸ್ ಮಂಗಳವಾರ ಹೇಳಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶಂಕರ ಟ್ರಾವೆಲ್ಸ್ ಮ್ಯಾನೇಜರ್ ಯಾಮಿನಿ ಯವರು, 230 ಜನರನ್ನು ನೇಪಾಳದ ಮೂಲಕ ಮಾನಸಸರೋವರ ಯಾತ್ರೆಗೆ ಕರೆದುಕೊಂಡು ಹೋಗಲಾಗಿತ್ತು. 230 ಮಂದಿ ಪೈಕಿ 70 ಮಂದಿ ಸಿಮಿಕೋಟ್ ನಲ್ಲಿ, 40 ಮಂದಿ ಹಿಲ್ಸಾದಲ್ಲಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ. ಭೂ ಮಾರ್ಗವಾಗಿ ತೆರಳಿದ್ದ 120 ಜನರು ಕಠ್ಮಂಡುವಿಗೆ ವಾಪಸ್ಸಾಗುತ್ತಿದ್ದಾರೆ. ಯಾವುದೇ ರೀತಿಯ ಆತಂಕಗಳು ಬೇಡ ಎಂದು ಹೇಳಿದ್ದಾರೆ.
ನೇಪಾಳದ ಸಿಮಿಕೋಟ್ ನಲ್ಲಿ ಕಳೆದ 4 ದಿನಗಳಿಂಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ರಾಜ್ಯ ಸುಮಾರು 200ಕ್ಕೂ ಹೆಚ್ಚು ಮಂದಿ ಯಾತ್ರಾಥರ್ಿಗಳು ಯಾವುದೇ ರೀತಿಯ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇದರಿಂದ ಕುಟುಂಬಸ್ಥರು ಭೀತಿಗೊಳಗಾಗಿದ್ದರು.
ಪ್ರತಿಕೂಲ ಹವಾಮಾನದಿಂದಾಗಿ ಯಾತ್ರೆಗೆ ತೆರಳಲು ಸಾಧ್ಯವಾಗದೆ ಶಿಬಿರಗಳಲ್ಲಿಯೇ ಬೀಡುಬಿಟ್ಟಿದ್ದರು. ಸಂಕಷ್ಟದಲ್ಲಿ ಸಿಲುಕಿರುವ ಯಾತ್ರಾಥರ್ಿಗಳ ಪೈಕಿ ಮೈಸೂರು, ರಾಮನಗರ, ಚನ್ನಪಚ್ಚಣ ನಿವಾಸಿಗಳೇ ಹೆಚ್ಚಾಗಿದ್ದರು ಎಂದು ಹೇಳಲಾಗುತ್ತಿತ್ತು.
ಸಂಕಷ್ಟದಲ್ಲಿರುವ ಭಾರತೀಯರನ್ನು ನೇಪಾಳದ ಭಾರತೀಯ ರಾಯಭಾರಿ ಕಚೇರಿ ರಕ್ಷಣೆ ಮಾಡುತ್ತಿದ್ದು, ಯಾತ್ರಿಕರನ್ನು ಹೆಲಿಕಾಪ್ಟರ್ ಮೂಲಕ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡುತ್ತಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 