ಶಾಯಿರಿ ಬಹುಭಾಷಾ ಕವಿಗೋಷ್ಠಿಯಲ್ಲಿ ಕವಿ ಮತ್ತು ಪತ್ರಕರ್ತರು ಸೇರಿದಂತೆ ಹಲವರಿಗೆ ಸನ್ಮಾನ
Many including poets and journalists honored at Shayari Multilingual Poetry Festival
ಕೊಪ್ಪಳ 16: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ರವಿವಾರ ಜರುಗಿದ ಶಾಯಿರಿ ಮತ್ತು ಬಹುಭಾಷಾ ಕವಿಗೋಷ್ಠಿ ಸಮಾರಂಭದಲ್ಲಿ ಜಿಲ್ಲೆಯ ಹಿರಿಯ ಉರ್ದು ಸಾಹಿತಿ ಹಾಗೂ ಕವಿ ಮತ್ತು ನಿವೃತ್ತ ಪ್ರಾಧ್ಯಾಪಕ ಅನ್ವರ್ ಹುಸೇನ್ , ಹಿರಿಯ ಪತ್ರಕರ್ತ ಸಾಧಿಕ್ ಅಲಿ ಹಾಗೂ ಮೈಸೂರಿನ ಸಮಾಜ ಸೇವಕ ಹಾಗೂ ಸಾಹಿತಿ ತಾಹಿರ ಅಲಿ ಸೇರಿದಂತೆ ಕೊಪ್ಪಳದ ಸರಕಾರಿ ಉರ್ದು ಪ್ರೌಢಶಾಲೆಯ ನಿವೃತ್ತ ಸಹ ಶಿಕ್ಷಕಿ ಶಮೀಮುನ್ನಿಸಾ ಬೇಗಮ್ ಹೊನಗುಂದ, ಮತ್ತು ಯಾಸ್ಮಿನ್ ಬೇಗಮ್ ಹಾಗೂ ಅಜೀಮಾ ಬೇಗಂ ರವರಿಗೆ ಸನ್ಮಾನಿಸಲಾಯಿತು .
ಶ್ರೀ ನಿಮಿಷಾಂಬ ಪ್ರಕಾಶನ ಹಾಗೂ ಶ್ರೀ ನಿಮಿಷಾಂಬ ಆರ್ಟ್ ಗ್ಯಾಲರಿ ಸಂಘಟನೆಗಳಿಂದ ಏರಿ್ಡಸಿದ ಶಾಹಿರಿ ಬಹುಭಾಷಾ ಕವಿಗೋಷ್ಠಿ ಸಮಾರಂಭದಲ್ಲಿ ಜಿಲ್ಲೆಯ ಕನ್ನಡ ಮತ್ತು ಉರ್ದು ಕವಿಗಳು ಸಾಹಿತಿಗಳು ಚಿಂತಕರು ಪಾಲ್ಗೊಂಡಿದ್ದರು ಹಿರಿಯ ಸಮಾಜ ಸೇವಕ ಕಿನ್ನಾಳ ಗ್ರಾಮದ ವೆಂಕಟರಾವ್ ದೇಸಾಯಿ ಸಮಾರಂಭದ ಉದ್ಘಾಟನೆ ನೆರವೇರಿಸಿದರೆ ಹಿರಿಯ ಪತ್ರಕರ್ತ ಹಾಗೂ ಕನ್ನಡ ಸಾಹಿತಿ ಜಿಎಸ್ ಗೋನಾಳ ಅಧ್ಯಕ್ಷತೆ ವಹಿಸಿದ್ದರು ಸಾಹಿತಿ ಶ್ರೀನಿವಾಸ್ ಚಿತ್ರಗಾರ ವಿದ್ಯಾವತಿ ಚಿತ್ರಗಾರ ಮಂಜುನಾಥ ಚಿತ್ರಗಾರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದೇ ವೇಳೆ ಉರ್ದು ಕನ್ನಡ ಕವಿಗಳು ತಮ್ಮ ತಮ್ಮ ಕವನ ವಾಚನ ಮಾಡಿದರು, ನಂತರ ಎಲ್ಲರಿಗೂ ಪ್ರಮಾಣ ಪತ್ರ ವಿತರಣೆ ಮಾಡಿ ಸನ್ಮಾನಿಸಿ ಶುಭ ಕೋರಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 