ಅವಧಿಗೆ ಮುನ್ನ ಜನಿಸಿದ ಮರಿಯಾನೆ ಸಾವು
ಯಲ್ಲಾಪುರ, ಜ 9, ಅವಧಿಗೆ ಮುನ್ನ ಜನಿಸಿದ ಆನೆ ಮರಿಯೊಂದು ತಾಲ್ಲೂಕಿನ ಬಾಳೆಹಳ್ಳಿ ಅರಣ್ಯ ಪ್ರದೇಶದಲ್ಲಿ ಗುರುವಾರ ಮೃತಪಟ್ಟಿದೆ.ಬುಧವಾರ ರಾತ್ರಿ ಹೆಣ್ಣಾನೆಗೆ ಪ್ರಸವ ವೇದನೆ ಕಾಣಿಸಿಕೊಂಡಿತ್ತು. ನಾಲ್ಕೈದು ಆನೆಗಳ ಹಿಂಡು ಕೆರೆಯ ಪಕ್ಕದ ಅರಣ್ಯದಲ್ಲಿ ಬೀಡು ಬಿಟ್ಟಿದ್ದವು. ತೀವ್ರ ನೋವಿನಿಂದ ಬಳಲಿರುವ ತಾಯಿ ಆನೆ ಹತ್ತಾರು ಮೀಟರಲರ್ ಅಂತರದಲ್ಲಿ ಹೊರಳಾಡಿದೆ. ಸುತ್ತಲಿನ ಸಣ್ಣ ಗಿಡಮರಗಳು ಮುರಿದಿರುವುದು ಕಂಡುಬಂದಿದೆ. ಮಧ್ಯರಾತ್ರಿ ಸಮಯದಲ್ಲಿ ಆನೆಯ ಚೀರಾಟ ಸನಿಹದ ಉಗ್ಗಿನಕೇರಿ ಗ್ರಾಮಸ್ಥರಿಗೂ ಕೇಳಿದೆ.ಗುಂಜಾವತಿ ಅರಣ್ಯ ವ್ಯಾಪ್ತಿಯ ಬಾಳೆಹಳ್ಳಿ ಪ್ರದೇಶದಲ್ಲಿ ಆನೆಯೊಂದು, ಅವಧಿಗೂ ಮುನ್ನ ಮರಿಗೆ ಜನ್ಮ ನೀಡಿದೆ. ಆದರೆ, ಸರಿಯಾಗಿ ಬೆಳವಣಿಗೆ ಆಗದ ಕಾರಣ ಮರಿ ಆನೆ ಜನಿಸುವಾಗಲೇ ಮೃತಪಟ್ಟಿದೆ ಎಂದು ಅಲ್ಲಿನ ಅರಣ್ಯ ಸಂರಕ್ಷಣಾಧಿಕಾರಿಗೆ ಎಸ್.ಎಂ.ವಾಲಿ ತಿಳಿಸಿದ್ದಾರೆ. ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 