ಮತದಾರರ ಗುರುತಿನ ಚೀಟಿ ಮಾದರಿಯಲ್ಲಿ ಮದುವೆ ಆಮಂತ್ರಣ
ಧಾರವಾಡ 16: ಭಾರತ ಚುನವಣಾ ಆಯೋಗದಿಂದ ನೀಡುವ ಮತದಾರರ ಗುರುತಿನ ಚೀಟಿಯನ್ನು ಹೋಲುವಂತೆ ರಚಿಸಿರುವ ಮದುವೆ ಆಮಂತ್ರಣ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಎಲ್ಲರ ಗಮನ ಸೆಳೆದಿದೆ.
ಬೆಸ್ಕಾಂ ನೌಕರರಾಗಿರುವ ಮಂಜುನಾಥ ಈರಪ್ಪ ಹೂಗಾರ ಹಾಗೂ ಹೆಸ್ಕಾಂನ ಇಂಜಿನೀಯರ್ ಆಗಿರುವ ಮಹೇಶ್ ಹೂಗಾರ ಅವರು ತಮ್ಮ ಸಹೋದರಿ ಅನ್ನಪೂರ್ಣಳ ಮದುವೆಯನ್ನು ಇದೇ ಎ.26 ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದಾರೆ. ಮದುವೆ ಸಂದರ್ಭದಲ್ಲಿಯೇ ಚುನಾವಣೆಯು ನಡೆಯುತ್ತಿರುವುದರಿಂದ ಅಮಂತ್ರಣ ಪತ್ರಿಕೆಯು ಮತದಾರರಲ್ಲಿ ಜಾಗೃತಿಯನ್ನೂ ಮೂಡಿಸುವಂತಿರಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ವಿಭಿನ್ನವಾಗಿ ಮುದ್ರಿಸಿ ವಿತರಿಸುತ್ತಿದ್ದಾರೆ.
ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಬಹುತೇಕ ಜನರು ತಮ್ಮ ಹಕ್ಕು ಚಲಾಯಿಸದೇ ಮತದಾನವನ್ನು ತಪ್ಪಿಸಿ ರಜೆ ಕಳೆಯಲು ಪ್ರವಾಸಕ್ಕೆ ತೆರಳುವುದನ್ನು ಹಿಂದಿನ ಚುನಾವಣೆಗಳಲ್ಲಿ ಗಮನಿಸಿ, ತಮ್ಮಿಂದ ಸಾಧ್ಯವಾದಷ್ಟು ಜನರಿಗೆ ತಿಳುವಳಿಕೆ ಮೂಡಿಸುವ ಪ್ರಯತ್ನವಾಗಿ ಈ ಕಾರ್ಯ ಮಾಡಿದ್ದೇವೆ ಎಂದು ನರಗುಂದದ ಹೂಗಾರ ಕುಟುಂಬದ ಸದಸ್ಯರು ಹೆಮ್ಮೆಯಿಂದ ಹೇಳುತ್ತಾರೆ. ಆಮಂತ್ರಣ ಪತ್ರಿಕೆಯಲ್ಲಿ ರಕ್ತದಾನ ಮತ್ತು ಮತದಾನದ ಮಹತ್ವ ಸಾರುವ ಸಂದೇಶಗಳನ್ನು ಮುದ್ರಿಸಲಾಗಿದೆ
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 