ಮದುವೆ ನಿಶ್ಚಯವಾಗಿಲ್ಲ, ವದಂತಿ ಹರಡದಿರಿ: ರಚಿತಾರಾಮ್
ಬೆಂಗಳೂರು, ಜ 23,ಸ್ಯಾಂಡಲ್ವುಡ್ ನ ಗುಳಿಕೆನ್ನೆ ಚೆಲುವೆ ರಚಿತಾರಾಮ್ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಿಲ್ಲೊಂದು ಸುದ್ದಿ ಹರಿದಾಡುತ್ತಿದೆ‘ಸೀತಾರಾಮ ಕಲ್ಯಾಣ’ದ ನಾಯಕ ನಿಖಿಲ್ ಕುಮಾರಸ್ವಾಮಿಯ ಜೊತೆ ಕುಚ್ ಕುಚ್ ನಡೆಯುತ್ತಿದೆ. . . . ರಚಿತಾಗೆ ಮದುವೆ ನಿಶ್ಚಯವಾಗಿದೆ ಎಂಬ ಗುಸುಗುಸು, ಪಿಸುಪಿಸು ಸುದ್ದಿ, ಸತತ ಹದಿನೈದು ದಿನಗಳಿಂದ ವೈರಲ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ರಚಿತಾರಾಮ್, ಕೇವಲ ಮನರಂಜನೆಗಾಗಿ ಸಲ್ಲದ ಸುದ್ದಿಗಳನ್ನು ಪ್ರಕಟಿಸಿ ಬೇಸರ ಉಂಟು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. “ಈ ನಡುವೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟ್ವಿಟರ್, ಇನ್ ಸ್ಟಾಗ್ರಾಮ್, ಯೂಟ್ಯೂಬ್ ಮೊದಲಾದೆಡೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ಸಿನಿಮಾಗಳ ಕುರಿತಾದ ವಿಷಯಗಳಾಗಲಿ, ವೈಯಕ್ತಿಕ ವಿಷಯಗಳಾಗಲಿ ನನ್ನ ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ. ಮನರಂಜನೆಗಾಗಿ ವದಂತಿ ಸೃಷ್ಟಿಸಿದರೆ ಖುಷಿಯಾಗಬಹುದು. ಆದರೆ ಅದರಿಂದ ನನಗೆ ಹಾಗೂ ವದಂತಿಗೆ ಸಿಲುಕಿದ ಸಂಬಂಧಪಟ್ಟ ವ್ಯಕ್ತಿಗಳಿಗೆ ಬೇಸರವಾಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಮುಖ್ಯವಾದ ವಿಚಾರವೆಂದರೆ, ನನಗೆ ಮದುವೆ ನಿಶ್ಚಯವಾಗಿಲ್ಲ. ನಾನು ಮದುವೆಯಾಗುವ ಸಂದರ್ಭದಲ್ಲಿ ನಿಮಗೆಲ್ಲ ವಿಚಾರ ತಿಳಿಸಿ, ಗುರು ಹಿರಿಯರ ಆಶೀರ್ವಾದದೊಡನೆ ಆಗುತ್ತೇನೆ. ವದಂತಿಗಳನ್ನು ನಂಬಿ ವೈಯಕ್ತಿಕ ವಿಚಾರಗಳ ಬಗ್ಗೆ ನಗೆಪಾಟಲಿಗೆ ಈಡುಮಾಡಬೇಡಿ” ಎಂದು ರಚಿತಾರಾಮ್ ವಿನಂತಿಸಿಕೊಂಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 