ವಿವಾಹಿತ ಮಹಿಳೆ ಆತ್ಮಹತ್ಯೆ
Married woman commits suicide
ರಾಯಬಾಗ 04: ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಆರತಿ ಪ್ರಶಾಂತ ಕಾಂಬಳೆ (26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೂಲತಃ ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ ಆರತಿ ಕಾಂಬಳೆ ಇತಳನ್ನು ಮೊರಬ ಗ್ರಾಮದ ಪ್ರಶಾಂತ ಇತನೊಂದಿಗೆ ವಿವಾಹ ಮಾಡಿ ಕೊಡಲಾಗಿತ್ತು. ಗಂಡ ಮತ್ತು ಮಕ್ಕಳೊಂದಿಗೆ ವಾಸವಾಗಿದ್ದರೂ ಕೂಡ ಇತಳನ್ನು ಅದೇ ಗ್ರಾಮದ ಸಾಗರ ಕಾಂಬಳೆ ಎಂಬುವನು ನಿನ್ನ ಗಂಡ ಮತ್ತು ಮಕ್ಕಳನ್ನು ಬಿಟ್ಟು ನನ್ನ ಜೊತೆ ಬಾಳ್ವೆ ಮಾಡು ಬಾ ನನ್ನ ಮದುವೆ ಮಾಡಿಕೊ ಇಲ್ಲದಿದ್ದರೆ ನಿನ್ನನ್ನು ಸಾಯುವವರೆಗೆ ಬಿಡುವುದಿಲ್ಲಾ ಅಂತಾ ಮೇಲಿಂದ ಮೇಲೆ ಹೇಳುತ್ತಾ ಮಾನಸಿಕ ತ್ರಾಸ ನೀಡಿ, ಕಿರುಕುಳ ನೀಡಿದ್ದರಿಂದ ಇತನ ಕಿರಕುಳಕ್ಕೆ ಬೇಸತ್ತು ಆರತಿ ಕಾಂಬಳೆ ಇವಳು ಸೋಮವಾರ ಮುಂಜಾನೆ 11.30 ಗಂಟೆ ಸುಮಾರಿಗೆ ಬೊಮ್ಮನಾಳ ಗ್ರಾಮದಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಆರತಿ ಇವಳ ತಾಯಿ ಲಕ್ಷ್ಮೀಬಾಯಿ ಭೀಮು ಕಾಂಬಳೆ ಇವರು ರಾಯಬಾಗ ಪೊಲೀಸ್ ಠಾಣೆ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 