ಹುತಾತ್ಮರ ದಿನಾಚರಣೆ
Martyrs' Day
ಕೊಪ್ಪಳ 30: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಜ್ಞಾಪಕಾರ್ಥವಾಗಿ ಇಂದು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕುಲಪತಿಗಳಾದ (ಪ್ರಭಾರ) ಪ್ರೊ.ಎಸ್.ವಿ.ಡಾಣಿಯವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಹಾದಿಯಲ್ಲಿ ಯುವಪೀಳಿಗೆ ಮುನ್ನಡೆಯಬೇಕು ಎಂದು ಹಿತ ನುಡಿಗಳನ್ನಾಡಿದರು. ಕುಲಸಚಿವರಾದ ಪ್ರೊ.ಕೆ.ರಮೇಶ್ ಅವರು, ಗಾಂಧೀಜಿಯವರ ತತ್ವ ಸಿದ್ಧಾಂತಗಳನ್ನು ನೆನೆಯುತ್ತಾ ಮೌಲ್ಯಯುತ ಮಾತುಗಳನ್ನು ಸ್ಮರಿಸುತ್ತಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಆಡಳಿತ ಅಧಿಕಾರಿಗಳಾದ ತಿಮ್ಮಾರೆಡ್ಡಿ ಮೇಟಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದವರನ್ನು ನೆನೆಯುತ್ತಾ ಅವರ ತ್ಯಾಗ ಬಲಿದಾನವನ್ನು ಕುರಿತು ಮಾತನಾಡಿದರು. ಅತಿಥಿ ಉಪನ್ಯಾಸಕರಾದ ಡಾ.ವೀರೇಶ್ ಉತ್ತಂಗಿ ನಿರೂಪಿಸಿದರು.ಕೆ.ಶಂಕರ್ ವಂದಿಸಿದರು. ಈ ವೇಳೆ ವಿಶ್ವವಿದ್ಯಾಲಯದ ಬೋದಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದು, ಮೌನಾಚರಣೆಯನ್ನು ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 