ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ
Mass marriages are a boon for the poor
ಹೂವಿನಹಡಗಲಿ 09: ಸಾಮೂಹಿಕ ವಿವಾಹ ಕಾರ್ಯಕ್ರಮ ಗಳು ಬಡವರಿಗೆ ವರದಾನವಾಗಿವೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ವಿಜಯಕುಮಾರ ಹೇಳಿದರು.ಪಟ್ಟಣದ ಗವಿಮಠದಲ್ಲಿ 31ನೇ ಗವಿಸಿದ್ದೇಶ್ವರ ಜಾತ್ರಾ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ, ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಮಠದ ಸಮಾಜ ಮುಖಿ ಕಾರ್ಯಕ್ರಮ ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಂಗೂರಿನ ಶಿವಯೋಗೀಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಗವಿಮಠದ ಹಿರಿಶಾಂತವೀರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.ಉತ್ತಂಗಿಯ ಸೋಮಶಂಕರ ಸ್ವಾಮೀಜಿ, ಹಾವನೂರಿನ ಶಿವಕುಮಾರ ಸ್ವಾಮೀಜಿ, ನಾಗತಿಬಸಾಪುರ ಗಿರಿರಾಜ ಹಾಲಸ್ವಾಮೀಜಿ, ಹಂಪಸಾಗರದ ಅಭಿನವ ಶಿವಲಿಂಗ ಸ್ವಾಮೀಜಿ, ಉಪನಾಯಕನಹಳ್ಳಿ ದೊಡ್ಡಬಸಯ್ಯ ಶಾಸ್ತ್ರಿ ಸಾನ್ನಿಧ್ಯ ವಹಿಸಿದ್ದರು.ಮುಖಂಡರಾದ ಕೋಡಿಹಳ್ಳಿ ಮುದುಕಪ್ಪ, ಹಕ್ಕಂಡಿ ಶಿವನಾಗಪ್ಪ, ಭಾಗ್ಯ ವಿಜಯಕುಮಾರ್ ಇದ್ದರು. 9 ಜೋಡಿಗಳ ಸಾಮೂಹಿಕ ವಿವಾಹ ನೆರವೇರಿತು. ಬೆಳಗ್ಗೆ ಜಂಗಮವಟುಗಳ ಶಿವದೀಕ್ಷೆ ಅಯ್ಯಾಚಾರ ಜರುಗಿತು. ಹಾಲಯ್ಯ ಶಾಸ್ತ್ರಿ ನೇತೃತ್ವದ ತಂಡ ಪೌರೋಹಿತ್ಯ ನೆರವೇರಿಸಿದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 