ಏ. 8ರಂದು ಇಂಡಿಯಲ್ಲಿ ಬೃಹತ್ ಹೋರಾಟ:ವಿ ಎಚ್ ಬಿರಾದಾರ
Massive protest in Indi on April 8: VH Brothers
ಏ. 8ರಂದು ಇಂಡಿಯಲ್ಲಿ ಬೃಹತ್ ಹೋರಾಟ:ವಿ ಎಚ್ ಬಿರಾದಾರ
ಲೋಕದರ್ಶನ ವರದಿ
ಇಂಡಿ 02: ಹಿಂದೂಪರ ಹೋರಾಟಗಾರ, ಪ್ರಾಮಾಣಿಕ ರಾಜಕಾರಣಿ, ಬಡವರ ಬಂಧು, ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಜೆಪಿ ಪಕ್ಷದಿಂದ ಉಚ್ಚಾಟನೆಯನ್ನು ಖಂಡಿಸಿ ದಿ. 8ರಂದು ಇಂಡಿ ನಗರದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಇಂಡಿ ತಾಲೂಕು ಪಂಚಮಸಾಲಿ ಸಮಾಜ ಘಟಕ ಅಧ್ಯಕ್ಷ ವಿ ಎಚ್ ಬಿರಾದಾರ ತಿಳಿಸಿದ್ದಾರೆ.
ಇಂದು ನಗರದ ಶಾಂತೇಶ್ವರ ಮಂಗಲ ಕಾರ್ಯದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿರುವುದನ್ನು ರದ್ದುಗೊಳಿಸಬೇಕೆಂದು ಆಗ್ರಹಿಸುವ ಹೋರಾಟದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಹೋರಾಟದಲ್ಲಿ ಇಂಡಿ ತಾಲೂಕಿನ ಹಿಂದೂ ಪರ ಹೋರಾಟಗಾರರು, ಸಮಾಜ ಬಾಂಧವರು ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಜನ ನಾಯಕ ದಯಸಾಗರ ಪಾಟೀಲ ಅವರು ಮಾತನಾಡಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯದ ಪ್ರಾಮಾಣಿಕ ರಾಜಕಾರಣಿ ಅವರನ್ನು ಪಕ್ಷದಿಂದ ಉಚ್ಚಾಟನೆಯನ್ನು ನಮ್ಮ ಮನಸ್ಸಿಗೆ ಅತಿವ ನೋವುಂಟು ಮಾಡಿದೆ, ಇದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು. ಸಭೆಯಲ್ಲಿ ಇಂಡಿ ತಾಲೂಕಿನ ಬಹುತೇಕ ಗ್ರಾಮಗಳಿಂದ ಹಿಂದೂ ಕಾರ್ಯಕರ್ತರು ಅಭಿಮಾನಿಗಳು ಆಗಮಿಸಿದರು.
ಶಿವಾನಂದ ಚಾಳಿಕಾರ, ಸೋಮು ದೇವರ, ಗಿರಿಮಲ್ಲಗೌಡ ಬಿರಾದಾರ, ರಮೇಶ್ ಕಲ್ಯಾಣಿ, ವಿನೋದ್ ಹದಗಲ್, ಅಕ್ಷಯ್ ಪಾಟೀಲ್,
ಅಕ್ಷಯ್ ಹಿಬಾರೆ, ಆನಂದ್ ದೇವರ, ಪ್ರದೀಪ್ ಪವಾರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 