ಮತಗಟ್ಟೆ ಅಧಿಕಾರಿಗಳ ತರಬೇತಿ ಕೇಂದ್ರಕ್ಕೆ ಮತಿವಣ್ಣನ್ ಭೇಟಿ: ಪರಿಶೀಲನೆ
ಕಾಗವಾಡ 08: ಚಿಕ್ಕೋಡಿ ಲೋಕಸಭಾ ಚುನಾವಣಾ ವೀಕ್ಷಕ (ಜನರಲ್) ಮತಿವಣ್ಣನ್ ಇವರು ಕಾಗವಾಡ ಮತ್ತು ಅಥಣಿ ಮತಕ್ಷೇತ್ರದ ಮತಗಟ್ಟೆ ಅಧಿಕಾರಿಗಳ ತರಬೇತಿ ಪಡೆಯುವ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ರವಿವಾರ ರಂದು ಕಾಗವಾಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನವಲಿಹಾಳ, ಮಂಗಸೂಳಿ ಗ್ರಾಮಗಳಿಗೆ ಭೇಟಿನೀಡಿ ಮತದಾನ ಕೇಂದ್ರಗಳ ಪರಿಶೀಲಿಸಿ ಮತಗಟ್ಟೆಯಲ್ಲಿ ಬರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ನಂತರ ಮಂಗಸೂಳಿ, ಕಾಗವಾಡ, ಲೋಕುರ ಚೇಕ್ಪೋಸ್ಟ್ ಪರಿಶೀಲನೆ ಮಾಡಿದರು.
ಮಧ್ಯಾಹ್ನ ಅಥಣಿ ಎಸ್.ಎಂ.ಎಸ್ ಮಹಾವಿದ್ಯಾಲಯ ಮತ್ತು ಜಾಧವಜಿ ಆನಾಂದಜಿ ಶಿಕ್ಷಣ ಸಂಸ್ಥೆಯ ಕೋಣೆಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮ ವೀಕ್ಷಿಸಿದರು. ಹಾಗೂ ಕೆಲವೊಂದು ಉಪಯುಕ್ತ ಮಾಹಿತಿಯನ್ನು ತರಬೇತಿಗಾರರಿಗೆ ನೀಡಿದರು. ಮತ್ತು ಇಲ್ಲಿಯ ತರಬೇತಿಯನ್ನು ವೀಕ್ಷಿಸಿ, ಸಂತಸ ವ್ಯಕ್ತಪಡಿಸಿದರು.
ಅಥಣಿಯಸಹಾಯಕ ಚುನಾವಣಾಧಿಕಾರಿ ಕೆ.ಎಲ್.ಶ್ರೀನಿವಾಸ, ಕಾಗವಾಡದಎಸ್.ಎಸ್.ಹಿರೇಮಠ, ಅಥಣಿ ತಹಸಿಲ್ದಾರ ಎಂ.ಎನ್.ಬಳಿಗಾರ, ಕಾಗವಾಡ ತಹಸೀಲ್ದಾರ ಮೇಘರಾಜ ನಾಯಿಕ, ತಾಲೂಕಾ ಪಂಚಾಯತಿಯ ಕಾರ್ಯನಿವರ್ಾಹಕ ಅಧಿಕಾರಿ ರವಿ ಬಂಗಾರಪನ್ನವರ, ಗ್ರೇಡ್-2 ತಹಸೀಲ್ದಾರ ಆರ್.ಆರ್.ಬುರಲಿ, ಕಾಗವಾಡ ಸಿಡಿಪಿಒ ಡಾ. ಸುರೇಶ ಕದ್ದು, ಬಸವರಾಜ ಬೋರಗಲ, ಪಿಡಿಒ ಗೋಪಾಲ ಮಾಳಿ, ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 