ಕದಂಬೋತ್ಸವ ಪ್ರತೀ ಮನೆಯ ಉತ್ಸವ ಆಗಲಿ:ಅಪರ ಜಿಲ್ಲಾಧಿಕಾರಿ
May Kadambotsava become a festival in every home
ಕಾರವಾರ 11: ಬನವಾಸಿಯಲ್ಲಿ ಏಪ್ರಿಲ್ ಇಂದು ಮತ್ತು ನಾಳೆ ನಡೆಯುವ ಕದಂಬೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಇದನ್ನು ಜಿಲ್ಲೆಯ ಪ್ರತಿ ಮನೆಯ ಉತ್ಸವ ಎಂಬಂತೆ ಸಂಭ್ರಮದೊಂದಿಗೆ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.
ಅವರು ಶುಕ್ರವಾರ ಕಾರವಾರಕ್ಕೆ ಆಗಮಿಸಿದ ಕದಂಬ ಜ್ಯೋತಿಯನ್ನು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಿ ಮಾತನಾಡಿದರು.
ಕದಂಬೋತ್ಸವವು ನಾಡಿನ ಪ್ರಮುಖ ಉತ್ಸವವಾಗಿದ್ದು, ಇದನ್ನು ನಮ್ಮ ಜಿಲ್ಲೆಯಲ್ಲಿ ಆಚರಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಬನವಾಸಿಯಲ್ಲಿ 2 ದಿನಗಳ ಕಾಲ ನಡೆಯುವ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ, ಕವಿಗೋಷ್ಠಿ ಸೇರಿದಂತೆ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ಭಾಗವಹಿಸುವ ಮೂಲಕ ಕದಂಬೋತ್ಸವವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿರು ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 