ರಾಷ್ಟ್ರೀಯ ಪಲ್ಸ್ ಪೋಲಿಯೊ ಜಾಗೃತಿ ಜಾಥಾಗೆ ಮೇಯರ್ ಚಾಲನೆ
ಬೆಂಗಳೂರು, ಜ 17,ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಪಲ್ಸ್ ಪೋಲಿಯೊ ಅಂಗವಾಗಿ ಬಿಬಿಎಂಪಿಯಿಂದ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥಾಗೆ ಮೇಯರ್ ಎಂ. ಗೌತಮ್ ಕುಮಾರ್ ಚಾಲನೆ ನೀಡಿದರು. ಜನ ಜಾಗೃತಿ ಜಾಥಾ ಪಾಲಿಕೆ ಕೇಂದ್ರ ಕಛೇರಿ ಆವರಣದಿಂದ ಹೊರಟು ಹಡ್ಸನ್ ವೃತ್ತ, ಬಳಿಕ ಮಿಷನ್ ರೋಡ್ ಮೂಲಕ ಸಂಪಂಗಿರಾಮನಗರ ಗಲ್ಲಿಯ ಒಳ ಭಾಗದಿಂದ ರಾಜಾರಾಮ್ ಮೋಹಮ್ ರಾಯ್ ರಸ್ತೆ ಮುಖಾಂತರ ಪಾಲಿಕೆ ಕೇಂದ್ರ ಕಛೇರಿವರೆಗೆ ಬಂದು ಸಂಪನ್ನಗೊಂಡಿತು. ಜಾಥಾ ವೇಳೆ ಮಕ್ಕಳ ಪೋಷಕರಿಗೆ ಕಡ್ಡಾಯವಾಗಿ ಐದು ವರ್ಷದವರೆಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸುವಂತೆ ಮಹಾಪೌರರು ಹಾಗೂ ಆಯುಕ್ತರು ಮನವಿ ಮಾಡಿದರು.ಈ ವೇಳೆ ಬಿಬಿಎಂಪಿ ಪ್ರತಿಪಕ್ಷ ಪಕ್ಷ ನಾಯಕ ಅಬ್ದುಲ್ ವಾಜೀದ್, ಸ್ಥಳೀಯ ಪಾಲಿಕೆ ಸದಸ್ಯ ವಸಂತ ಕುಮಾರ್, ವಿಶೇಷ ಆಯುಕ್ತರು(ಆರೋಗ್ಯ) ಡಾ. ರವಿಕುಮಾರ್ ಸುರಪುರ, ವಿಶೇಷ ಆಯುಕ್ತರು(ಶಿಕ್ಷಣ) ವೃಷಬೇಂದ್ರ ಸ್ವಾಮಿ, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ, ರೋಟರಿ ಕ್ಲಬ್ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆರು, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 