ಕೊಪ್ಪಳದಲ್ಲಿ ಭಗವಾನ್ ಮಹಾವೀರ ಜಯಂತಿಯ ಅರ್ಥಪೂರ್ಣ ಮೆರವಣಿಗೆ : ಸಂಘರ್ಷಮಯ ವಾತಾವರಣದ ಜಗತ್ತಿಗೆ ಮಹಾವೀರರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ- ಕರ್ಣಕುಮಾರ
Meaningful procession of Lord Mahavir Jayanti in Koppal: Mahavir's principles are always relevant in
ಲೋಕದರ್ಶನ ವರದಿ
ಕೊಪ್ಪಳ ಮಾರ್ಚ್ 31 : ಸಂಘರ್ಷಮಯ ವಾತಾವರಣದ ಜಗತ್ತಿಗೆ ಮಹಾವೀರರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಮಂಗಳವಾರ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಸಹಯೋಗದಲ್ಲಿ ಭಗವಾನ್ ಮಹಾವೀರರ ಜಯಂತಿಯ ಪ್ರಯುಕ್ತ ಹಮ್ಮಿಕೊಂಡಿದ್ದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ಸಾಮಾಜಿಕವಾಗಿ ಕಾಡುತ್ತಿರುವ ಅನೇಕ ಸವಾಲುಗಳು ನಿವಾರಣೆಯಾಗಲು ದಾರ್ಶನಿಕರ ಚಿಂತನೆ, ಸಂದೇಶಗಳಿಂದ ಸಾಧ್ಯವಿದೆ. ಭಗವಾನ್ ಮಹಾವೀರರ ಸಂದೇಶ, ಸತ್ಯ ಮತ್ತು ಅಹಿಂಸಾ ಪಾಲನೆಯಿಂದ ಸಾಮರಸ್ಯದ ಸಮಾಜ ಕಟ್ಟುವ ಅಗತ್ಯತೆ ಹಿಂದೆಂದಿಗಿಂತಲೂ ಈಗ ಇದೆ. ಜೈನರ 24ನೇ ತೀಥಂರ್ಕರರಾಗಿದ್ದ ಮಹಾವೀರರ ತತ್ವ ಹಾಗೂ ಶಾಂತಿಯ ಪರಮೋಚ್ಚ ಸಂದೇಶಗಳು ಇಂದಿನ ವಿಶ್ವಕ್ಕೆ ದಾರಿ ದೀಪವಾಗಿವೆ ಎಂದರು. ಈ ಸಂದರ್ಭದಲ್ಲಿ ಜೈನ ಸಮಾಜದ ಅಧ್ಯಕ್ಷರಾದ ಮಹೀಂದ್ರ ಚೋಪ್ರಾ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಅರ್ಥಪೂರ್ಣ ಮೆರವಣಿಗೆ: ಭಗವಾನ್ ಮಹಾವೀರ ಜಯಂತಿ ಅಂಗವಾಗಿ ಮಹಾವೀರರ ಭಾವಚಿತ್ರದ ಮೆರವಣಿಗೆ ನಗರದ ಅಶೋಕ ವೃತ್ತದಿಂದ ಪ್ರಾರಂಭಗೊಂಡು ಜವಾಹರ ರಸ್ತೆ, ಗಡಿಯಾರ ಕಂಬದ ಮಾರ್ಗವಾಗಿ ಕೋಟೆ ರಸ್ತೆಯ ಜೈನ್ ಬಸದಿವರೆಗೆ ಸಾಗಿ, ಅಲ್ಲಿ ಪೂಜಾ ಕಾರ್ಯಕ್ರಮ ಜರುಗಿತು. ನಂತರ ಅಲ್ಲಿಂದ ಪುನಃ ಗಡಿಯಾರ ಕಂಬದ ಮಾರ್ಗವಾಗಿ ಗೋಶಾಲೆ ರಸ್ತೆಯ ಜೈನ್ ಮಂದಿರದ ವರೆಗೆ ಶಾಂತಿ ಸಂದೇಶಗಳ ಘೋಷಣೆಯೊಂದಿಗೆ ಸಾಗುವ ಮೂಲಕ ಅರ್ಥಪೂರ್ಣವಾಗಿ ಜರುಗಿತು. ಮೆರವಣಿಗೆಯಲ್ಲಿ ಸಮಾಜದ ಮುಖಂಡರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 