ಕಡಲೆ ಬೆಳೆಯಲ್ಲಿ ಸೊರಗು ರೋಗ ನಿರ್ವಹಣೆಗೆ ರೈತರು ಅನುಸರಿಸಬೇಕಾದ ಕ್ರಮಗಳು
Measures to be followed by farmers to manage rust disease in chickpea crop
ಕಡಲೆ ಬೆಳೆಯಲ್ಲಿ ಸೊರಗು ರೋಗ ನಿರ್ವಹಣೆಗೆ ರೈತರು ಅನುಸರಿಸಬೇಕಾದ ಕ್ರಮಗಳು
ಧಾರವಾಡ 16: ಧಾರವಾಡ ಜಿಲ್ಲೆಯಾದ್ಯಂತ ಹಿಂಗಾರು ಹಂಗಾಮಿನಲ್ಲಿ ಕಡಲೆ ಬೀಜಗಳು 1,81,595 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಖ್ಯ ಹಿಂಗಾರು ಬೆಳೆ ಆಗಿರುವ ಕಡಲೆಯಲ್ಲಿ ಅಲ್ಲಲ್ಲಿ ಸೊರಗು ರೋಗದ ಬಾಧೆ ಕಂಡು ಬರುತ್ತಿದ್ದು, ಪ್ರಾರಂಭದಲ್ಲಿ ಸ್ಥಾನಿಕವಾಗಿ 1 ಅಥವಾ 2 ಗಿಡಗಳಲ್ಲಿ ಕಂಡುಬಂದು ನಂತರ ಸಂಪೂರ್ಣ ಹೊಲವು ಬಾಧೆಗೆ ಒಳಪಡುವ ಸಾಧ್ಯತೆಯಿರುವುದು. ರೈತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.
ಕಡಲೆಯಲ್ಲಿ ಸೊರಗು ರೋಗ ನಿರ್ವಹಣೆ: ಪ್ರತಿ ವರ್ಷ ಪದೇಪದೇ ಅದೇ ಕ್ಷೇತ್ರದಲ್ಲಿ ಕಡಲೆ ಬೆಳೆಯನ್ನು ಅಥವಾ ಮುಂಗಾರಿನಲ್ಲಿ ದ್ವಿದಳ ಧಾನ್ಯ ಬೆಳೆದು ಹಿಂಗಾರಿನಲ್ಲಿ ಕಡಲೆ ಬೆಳೆಯುವುದರಿಂದ ಸೊರಗು ರೋಗದ ಬಾಧೆ ಹೆಚ್ಚಾಗುತ್ತದೆ ಆದ್ದರಿಂದ ಬೆಳೆ ಪರಿರ್ವತನೆ ಅವಶ್ಯ. ಸೊರಗು ರೋಗ ಬಾಧೆಗೊಳಗಾದ ಸಸಿಗಳನ್ನು ಪ್ರಾರಂಭಿಕ ಹಂತದಲ್ಲಿಯೇ ಕಿತ್ತು ನಾಶಪಡಿಸಬೇಕು ನಂತರ ರೋಗ ಹರಡದಂತೆ ಸಂಯುಕ್ತ ಶೀಲೀಂಧ್ರನಾಶಕ (ಶೇ 37.5 ಕಾರ್ಬಕ್ಸಿನ್ + ಶೇ 37.5 ಥೈರಾಮ್ ಡಬ್ಲೂ.ಎಸ್.)ವನ್ನು 2 ಗ್ರಾಂ ಪ್ರತಿ ಲೀಟರ್ಗೆ ನೀರಿಗೆ ಬೆರಸಿ ಬಾಧಿತ ಸಸಿಗಳ ಸುತ್ತಮುತ್ತ ಬೇರುಗಳಿಗೆ ಉಣಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 