ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ
Measures to resolve the drinking water problem
ಗದಗ 22: ಗದಗ-ಬೆಟಗೇರಿ ನಗರಸಭೆಯ 5ನೇ ವಾರ್ಡ್ ವ್ಯಾಪ್ತಿಯ ಕೆಎಚ್ಡಿಸಿ ನೇಹರು ಕಾಲನಿ ಬಡಾವಣೆಯಲ್ಲಿ ಹಲವು ದಿನಗಳಿಂದ ಕುಡಿಯುವ ನೀರಿನ ಸರಬರಾಜಿನಲ್ಲಿ ತೊಂದರೆ ಉಂಟಾಗಿತ್ತು. ಪ್ರಮುಖ ಪೈಪ್ಗೆ ಮೂರು ಇಂಚಿನ ವಾಲ್ವ್ ಇಲ್ಲದ ಕಾರಣ ನೀರು ಪೂರೈಕೆಗೆ ಸಮಸ್ಯೆಯಾಗಿತ್ತು.
ಈ ಸಮಸ್ಯೆಯನ್ನು ಗಮನಿಸಿದ ಗದಗ-ಬೆಟಗೇರಿ ನಗರ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಉಪಾಧ್ಯಕ್ಷೆ ದ್ರಾಕ್ಷಾಯಣಿ ಹಾಸಲಕರ್ ಅವರು, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಯುವ ನಾಯಕ ಕೃಷ್ಣಗೌಡ ಎಚ್. ಪಾಟೀಲ ಅವರಿಗೆ ವಿಷಯ ತಿಳಿಸಿದರು. ತಕ್ಷಣ ಸ್ಪಂದಿಸಿದ ಅವರು ನಗರಸಭೆಯ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಮೂರು ಇಂಚಿನ ವಾಲ್ವ್ ಒದಗಿಸುವಂತೆ ಕ್ರಮ ಕೈಗೊಂಡರು.
ಇದರಿಂದ ಬಡಾವಣೆಯ ನಿವಾಸಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದ್ದು, ಇತ್ತೀಚೆಗಷ್ಟೇ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಲಕ್ಷ್ಮೀ ಸಕ್ರಿ, ಕಸ್ತೂರಿ ಕೋಣಿ, ಸರಸ್ವತಿ ದೇವರಕೊಂಡಿ, ಪದ್ಮವ್ವ ಬಂಡಾರಿ, ಬಸವರಾಜ ಕೆಂಚಗುಂಡಿ, ವಾಲ್ಮನ್ ರಾಜ್ ಮಂಜುನಾಥ್ ದೊಡ್ಡಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 