ಕಲಾಪ ಚಿತ್ರೀಕರಣಕ್ಕೆ ಮಾಧ್ಯಮ ನಿರ್ಬಂಧ ಪ್ರಾಯೋಗಿಕ: ಸ್ಪೀಕರ್
ಬೆಂಗಳೂರು, ಅ.10: ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿರುವಂತೆಯೇ ರಾಜ್ಯದ ಉಭಯ ಸದನಗಳಲ್ಲಿಯೂ ವ್ಯವಸ್ಥೆ ಮಾಡಲಾಗಿದ್ದು, ಮಾಧ್ಯಮದವರಿಗೆ ಕಲಾಪದ ಎಲ್ಲಾ ಮಾಹಿತಿಯು ಸಿಗಲಿದೆ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟನೆ ನೀಡಿದ್ದಾರೆ. ಕಲಾಪ ದೃಶ್ಯ ಚಿತ್ರೀಕರಣಕ್ಕೆ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರವಾಗಿ ಸುದ್ದಿಗಾರರಿಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಸ್ಪೀಕರ್, ಇಂದಿನಿಂದ ಅಧಿವೇಶನ ಆರಂಭವಾಗುತ್ತಿದ್ದು, ರಾಜ್ಯದ ಅಭಿವೃದ್ಧಿ ಬೆಳವಣಿಗೆಗೆ ಸದನದಲ್ಲಿ ಚರ್ಚೆ ಆಗಬೇಕು ಎನ್ನುವ ಅಪೇಕ್ಷೆಯಿದೆ. ಯಾವುದನ್ನು ನಾವು ಮುಚ್ಚಿಡುವುದಿಲ್ಲ. ಈ ಬಗ್ಗೆ ಕೆಲ ವರ್ಷಗಳ ಹಿಂದೆಯೇ ಚರ್ಚೆ ನಡೆದಿತ್ತು. ಸ್ಪೀಕರ್ ಸಮ್ಮೇಳನದಲ್ಲಿ ನಿರಂತರವಾಗಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಚಚರ್ೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಹಾಗೇಯೇ ನಾವು ಇಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು. ಮಾಧ್ಯಮಗಳ ನಿರ್ಬಂಧ ಪ್ರಾಯೋಗಿಕವಾಗಿ ಮೂರು ದಿನಗಳು ಇರಲಿದೆ. ಬಳಿಕ ಇದನ್ನು ಮುಂದುವರೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಚರ್ಚಿಸಲಾಗುವುದು.ಈ ಮೂರು ದಿನಗಳಲ್ಲಿ ಬರುವ ಸಲಹೆ ಸೂಚನೆ ಪರಿಗಣಿಸಿ ಮಾಧ್ಯಮಗಳ ನಿರ್ಬಂಧ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 