ಧ್ಯಾನದಿಂದ ಕಾಯಿಲೆಗಳು ದೂರ
Meditation keeps diseases away
ಹನಮಸಾಗರ 11: ಅನಾಪಾನ ಧ್ಯಾನದಿಂದ ನಾವು ಎಲ್ಲವನ್ನು ಪಡೆಯಬಹುದು ಎಂದು ಬೆಂಗಳೂರಿನ ಮಾಸ್ಟರ್ ಲಲಿತಾ ಪವಾರ ಹೇಳಿದರು.
ಗ್ರಾಮದ ಶ್ರೀ ಕರಿಸಿದ್ದೇಶ್ವರ ಬಸವ ಮಂಟಪದಲ್ಲಿ ಸೋಮವಾರ ಸಂಜೆ ಮಂಡಲ ಸಂಕಲ್ಪ ಧ್ಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾನಸಿಕ ನೆಮ್ಮದಿಗೆ ಇದು ಅದ್ಭುತವಾಗಿ ಕೆಲಸ ಮಾಡುತ್ತದೆ. ಮಧುಮೇಹ, ಬಿಪಿಯಿಂದ ಬಳಲುವಂತಹವರು ಈ ಧ್ಯಾನದಿಂದ ಕೆಲವೇ ದಿನಗಳಲ್ಲಿ ಯತಾಸ್ಥಿತಿಗೆ ಬರುತ್ತಾರೆ. ಇದನ್ನು ಎಲ್ಲಿಯಾದರೂ, ಸುಖಾಸನದಿಂದ ಕುಳಿತುಕೊಂಡು ಮಾಡಬಹುದಾಗಿದೆ. ಸಹಜವಾದ ಉಸಿರಾಟವನ್ನು ಗಮನಿಸುತ್ತಾ ಹೊಗಬೇಕು.
ಧ್ಯಾನ ಎಂದರೆ ಉಸಿರಾಟದ ಮೇಲೆ ಗಮನ, ಒಂದು ದಿವಸ ಬಿಡದೆ ಮಾಡಬೇಕು ಇದರಿಂದ ನಮಗೆ ಬ್ರಹ್ಮಾಂಡದ ವಿಶ್ವಶಕ್ತಿ ನಮಗೆ ಸಿಗುತ್ತದೆ. ಇದೇ ಮಾ.16 ರಂದು ಶ್ರೀ ಕರಿಸಿದ್ದೇಶ್ವರ ಬಸವ ಮಂಟಪದಲ್ಲಿ ಉಚಿತವಾಗಿ ಧ್ಯಾನ ಮಹಾಯಜ್ಞ ಹಮ್ಮಿಕೊಳ್ಳಲಾಗಿದೆ. ತಪ್ಪಿಸದೆ ಎಲ್ಲರೂ ಆಗಮಿಸಿ ಸದುಪಯೋಗ ಪಡೆದುಕೊಳ್ಳ ಎಂದರು.
ಇದೇ ವೇಳೆ ಪತ್ರಿಕಟ್ಟಿ ಬಸವೇಶ್ವರ ತರುಣ ಸಂಘ, ನಿಸರ್ಗ ಸಂಗೀತ ವಿದ್ಯಾಲಯ ಸಂಘ, ಡಾ.ಪುಟ್ಟರಾಜ ಗಾನಯೋಗಿ ಭಜನಾ ಸಂಘ, ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಘ, ಅಕ್ಕಮಾಹಾದೇವಿ ಬಳಗ ಸೇರಿದಂತೆ ನಾನಾ ಸಂಘದವರು ಭಾಗಿಯಾಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 