ಫೆ.21 ಮತ್ತು 22 ರಂದು ಹಳೆ ಪಿಂಚಣಿ ವಂಚಿತರ ಸಭೆ
Meeting of old pensioners on Feb. 21 and 22
ಲೋಕದರ್ಶನ ವರದಿ
ಹಾರೂಗೇರಿ 20: 2006ರ ಪೂರ್ವದಲ್ಲಿ ನೇಮಕಾತಿ ಹೊಂದಿ ನಂತರ ಅನುದಾನಕ್ಕೊಳಪಟ್ಟ ಶಾಲಾ ಕಾಲೇಜುಗಳ ನೌಕರ ಸಿಬ್ಬಂದಿಗೆ ಹಳೆಯ ಪಿಂಚಣಿ ಜಾರಿಗೊಳಿಸುವಂತೆ ಒತ್ತಾಯಿಸಿ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಫೆ.21 ಮತ್ತು 22 ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಹಳೆ ಪಿಂಚಣಿ ವೇದಿಕೆ ರಾಜ್ಯ ಕಾನೂನು ಸಲಹೆಗಾರ ಎಸ್.ಎಲ್.ಜಾಧವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದ ಶ್ರೀ ಕರೆಸಿದ್ದೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಳೆಯ ಪಿಂಚಣಿ ವಂಚಿತರ ಸಭೆ ಫೆ.21 ರಂದು ಶನಿವಾರ ಮಧ್ಯಾಹ್ನ 2ಗಂಟೆಗೆ ಕರೆಸಿದ್ದೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕರೆಯಲಾಗಿದೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಹಳೆಯ ಪಿಂಚಣಿ ವಂಚಿತರ ಸಭೆಯನ್ನು ಫೆ.22 ರಂದು ಭಾನುವಾರ ಬೆಳಗಾವಿ ಲೇಕ್ವ್ಯೂವ್ ಆಸ್ಪತ್ರೆ ಸಮೀಪದ ಬೇಗಂ ಲತೀಪ ಬಾಲಕಿಯರ ಪ್ರೌಢಶಾಲೆಯಲ್ಲಿ ಕರೆಯಲಾಗಿದೆ.
ಈ ಸಭೆಗಳಲ್ಲಿ ಪಿಂಚಣಿ ವಂಚಿತರ ವೇದಿಕೆ ರಾಜ್ಯಾಧ್ಯಕ್ಷ ಡಾ.ಪಿ.ಎಸ್.ಕೊಕಟನೂರ, ವಿಭಾಗೀಯ ಅಧ್ಯಕ್ಷ ಡಾ.ಆರ್.ಎಮ್.ಸನದಿ, ಬೆಳಗಾವಿ ಜಿಲ್ಲಾಧ್ಯಕ್ಷ ಆಯ್.ಬಿ.ಬಿರಾದಾರ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾಧ್ಯಕ್ಷ ಬಿ.ಎ.ನಿವಲಗಿ ಹಾಗೂ ಆರ್.ವಾಯ್.ಬೆಳಗಲಿ ಭಾಗವಹಿಸಿ, ರಾಜ್ಯ ವೇದಿಕೆಯ ಮುಂದಿನ ನಡೆ ಹಾಗೂ ಇಲ್ಲಿಯವರೆಗಿನ ಬೆಳವಣಿಗೆಗಳ ಕುರಿತು ವಿವರಣೆ ನೀಡಲಿದ್ದು, 2006ರ ಪೂರ್ವದಲ್ಲಿ ನೇಮಕಾತಿ ಹೊಂದಿ ನಂತರ ಅನುದಾನಕ್ಕೊಳಪಟ್ಟು ನಿವೃತ್ತಿ ಪಡೆದ ಹಾಗೂ ಹಾಲಿ ಸೇವೆಯಲ್ಲಿರುವ ನೌಕರರು ಸಭೆಗೆ ಹಾಜರಾಗಬೇಕೆಂದು ಹಳೆ ಪಿಂಚಣಿ ವೇದಿಕೆ ರಾಜ್ಯ ಕಾನೂನು ಸಲಹೆಗಾರ ಎಸ್.ಎಲ್.ಜಾಧವ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 