ರೈತರ ಹೆಚ್ಚುವರಿ ಭೂ ಪರಿಹಾರದ ಕುರಿತು ಸಭೆ
Meeting on additional land compensation for farmers
ರಾಣೇಬೆನ್ನೂರು 18 : ಇಲ್ಲಿನ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ರೈತರ ಹೆಚ್ಚುವರಿ ಭೂ ಪರಿಹಾರದ ಕುರಿತು ಸಭೆ ನಡೆಯಿತು. ಹಾವೇರಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಪರಿಹಾರ ಕುರಿತು ಬಹು ಚರ್ಚೆ ನಡೆಯಿತು. ರೈತರು ಮತ್ತು ರೈತ ಸಂಘದವರು ಮಂಡಿಸಿದ ಪರಿಹಾರ ಬೇಡಿಕೆಗಳನ್ನು ಸೂಕ್ಷ್ಮವಾಗಿ ಆಲಿಸಿದ ಉಪವಿಭಾಗಾಧಿಕಾರಿಗಳು ಅತೀ ಶೀಘ್ರದಲ್ಲಿಯೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು , ಪರಿಹಾರ ಕುರಿತಂತೆ ಚರ್ಚಿಸಿ, ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ರೈತ ಮುಖಂಡರಾದ ಜಗದೀಶ್ ಕೆರೂಡಿ, ಚೆನ್ನಬಸಪ್ಪ ಗುಗ್ಗರಿ, ಸತೀಶ್ ಹೊಳಬಾಗಿಲು, ಇಕ್ಬಾಲ್ ಸಾಬ್ ರಾಣೇಬೆನ್ನೂರು, ಹನುಮಂತಪ್ಪ ಗೋಡೆಮ್ನನವರ್, ಹನುಮಂತಪ್ಪ ದೊಡ್ಮನಿ, ಗೋವಿಂದಪ್ಪ ಲಮಾಣಿ, ಜಯಪ್ಪ ಲಮಾಣಿ, ಹನುಮಂತ್ ದೊಡ್ಮನಿ, ಸಿದ್ದಪ್ಪ ಚಳಗೇರಿ, ಅಶೋಕ್ ಕೊಪ್ಪದ, ಸೇರಿದಂತೆ ಮತ್ತಿತರರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 