ರೈತರ ಹೆಚ್ಚುವರಿ ಭೂ ಪರಿಹಾರದ ಕುರಿತು ಸಭೆ
Meeting on additional land compensation for farmers
ರಾಣೇಬೆನ್ನೂರು 18 : ಇಲ್ಲಿನ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ರೈತರ ಹೆಚ್ಚುವರಿ ಭೂ ಪರಿಹಾರದ ಕುರಿತು ಸಭೆ ನಡೆಯಿತು. ಹಾವೇರಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಪರಿಹಾರ ಕುರಿತು ಬಹು ಚರ್ಚೆ ನಡೆಯಿತು. ರೈತರು ಮತ್ತು ರೈತ ಸಂಘದವರು ಮಂಡಿಸಿದ ಪರಿಹಾರ ಬೇಡಿಕೆಗಳನ್ನು ಸೂಕ್ಷ್ಮವಾಗಿ ಆಲಿಸಿದ ಉಪವಿಭಾಗಾಧಿಕಾರಿಗಳು ಅತೀ ಶೀಘ್ರದಲ್ಲಿಯೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು , ಪರಿಹಾರ ಕುರಿತಂತೆ ಚರ್ಚಿಸಿ, ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ರೈತ ಮುಖಂಡರಾದ ಜಗದೀಶ್ ಕೆರೂಡಿ, ಚೆನ್ನಬಸಪ್ಪ ಗುಗ್ಗರಿ, ಸತೀಶ್ ಹೊಳಬಾಗಿಲು, ಇಕ್ಬಾಲ್ ಸಾಬ್ ರಾಣೇಬೆನ್ನೂರು, ಹನುಮಂತಪ್ಪ ಗೋಡೆಮ್ನನವರ್, ಹನುಮಂತಪ್ಪ ದೊಡ್ಮನಿ, ಗೋವಿಂದಪ್ಪ ಲಮಾಣಿ, ಜಯಪ್ಪ ಲಮಾಣಿ, ಹನುಮಂತ್ ದೊಡ್ಮನಿ, ಸಿದ್ದಪ್ಪ ಚಳಗೇರಿ, ಅಶೋಕ್ ಕೊಪ್ಪದ, ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 