ರೈತರ ಹೆಚ್ಚುವರಿ ಭೂ ಪರಿಹಾರದ ಕುರಿತು ಸಭೆ
Meeting on additional land compensation for farmers
ರಾಣೇಬೆನ್ನೂರು 18 : ಇಲ್ಲಿನ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ರೈತರ ಹೆಚ್ಚುವರಿ ಭೂ ಪರಿಹಾರದ ಕುರಿತು ಸಭೆ ನಡೆಯಿತು. ಹಾವೇರಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಪರಿಹಾರ ಕುರಿತು ಬಹು ಚರ್ಚೆ ನಡೆಯಿತು. ರೈತರು ಮತ್ತು ರೈತ ಸಂಘದವರು ಮಂಡಿಸಿದ ಪರಿಹಾರ ಬೇಡಿಕೆಗಳನ್ನು ಸೂಕ್ಷ್ಮವಾಗಿ ಆಲಿಸಿದ ಉಪವಿಭಾಗಾಧಿಕಾರಿಗಳು ಅತೀ ಶೀಘ್ರದಲ್ಲಿಯೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು , ಪರಿಹಾರ ಕುರಿತಂತೆ ಚರ್ಚಿಸಿ, ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ರೈತ ಮುಖಂಡರಾದ ಜಗದೀಶ್ ಕೆರೂಡಿ, ಚೆನ್ನಬಸಪ್ಪ ಗುಗ್ಗರಿ, ಸತೀಶ್ ಹೊಳಬಾಗಿಲು, ಇಕ್ಬಾಲ್ ಸಾಬ್ ರಾಣೇಬೆನ್ನೂರು, ಹನುಮಂತಪ್ಪ ಗೋಡೆಮ್ನನವರ್, ಹನುಮಂತಪ್ಪ ದೊಡ್ಮನಿ, ಗೋವಿಂದಪ್ಪ ಲಮಾಣಿ, ಜಯಪ್ಪ ಲಮಾಣಿ, ಹನುಮಂತ್ ದೊಡ್ಮನಿ, ಸಿದ್ದಪ್ಪ ಚಳಗೇರಿ, ಅಶೋಕ್ ಕೊಪ್ಪದ, ಸೇರಿದಂತೆ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 