ಕೇಂದ್ರ, ರಾಜ್ಯಗಳ ಬಾಂಧವ್ಯ ಬಲವರ್ಧನೆ: ರಾಯ್ ಪುರದಲ್ಲಿ ಅಮಿತ್ ಷಾ ನೇತೃತ್ವದಲ್ಲಿ ಸಭೆ
ರಾಯ್ ಪುರ, ಜ 28, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಾಂಧವ್ಯ ಬಲವರ್ಧನೆ, ಗಡಿ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕೇಂದ್ರೀಯ ವಲಯ ಮಂಡಳಿಯ ೨೨ನೇ ಸಭೆ ಮಂಗಳವಾರ ಇಲ್ಲಿ ಆಯೋಜನೆಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ಉದ್ದೇಶ ಹೊಂದಲಾಗಿದೆ.ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ವಿಶೇಷವಾಗಿ ಸಮಾಲೋಚನೆ ನಡೆಸಲಾಗುತ್ತಿದೆ. ಅಂತಾರಾಜ್ಯ ವಿವಾದಗಳನ್ನು ಪರಿಹರಿಸುವ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ತಂಟೆ ತಕರಾರುಗಳನ್ನುಇತ್ಯರ್ಥಪಡಿಸುವುದು ಸಹ ಈ ಮಂಡಳಿಯ ಜವಾಬ್ದಾರಿಯಾಗಿದೆ.ದೇಶದಲ್ಲಿ ೫ ವಲಯ ಮಂಡಳಿಗಳಿದ್ದು, ಇವು ೧೯೫೭ರಲ್ಲಿ ಅಸ್ಥಿತ್ವಕ್ಕೆ ಬಂದಿವೆ. ಈ ಮಂಡಳಿಗಳಿಗೆ ಕೇಂದ್ರ ಗೃಹ ಸಚಿವರು ಶಾಶ್ವತ ಅಧ್ಯಕ್ಷರು. ಕಾನೂನು ಸುವ್ಯವಸ್ಥೆ ನಿಭಾಯಿಸುವ ನಿಟ್ಟಿನಲ್ಲಿ ಸಭೆಯಲ್ಲಿ ಗಂಭೀರ ಮತ್ತು ಮಹತ್ವದ ಚರ್ಚ ನಡೆಯಲಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 