ಲಾಕ್ ಡೌನ್ ವೇಳೆ ಮಾನಸಿಕ ಆರೋಗ್ಯ ಮುಖ್ಯ: ರಹಾನೆ
ಮುಂಬೈ, ಏ 3,ಕೊರೊನಾ ವೈರಸ್ ಸೋಂಕು ವಿರುದ್ಧ ಹೋರಾಟ ನಡೆಸುತ್ತಿರುವ ಭಾರತ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರಗಳ ಕ್ರಮವನ್ನು ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯಾ ರಹಾನೆ, ಶ್ಲಾಘಿಸಿದ್ದು, ಲಾಕ್ಡೌನ್ನಂಥ ಕಠಿಣ ಸಂದರ್ಭಗಳಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸಹ ಅತ್ಯಂತ ಮುಖ್ಯವಾದ ಕೆಲಸ ಎಂದು ಹೇಳಿದ್ದಾರೆ.
"ಲಾಕ್ಡೌನ್ ಸಮಯದಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಕೂಡ ಅತಿ ಮುಖ್ಯ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ, ಬಿಎಂಸಿ ಮತ್ತು ಎಎಂಪಿ ಕಾರ್ಯ ಶ್ಲಾಘನೀಯ. ಜನರ ಮಾನಸಿಕ ಸ್ವಾಸ್ಥ್ಯಕ್ಕಾಗಿ ಅವರನ್ನು ಬೆಂಬಲಿಸಲು ಉಚಿತ ಸಹಾಯವಾಣಿಯನ್ನು ರಚಿಸಿರುವುದು ಅತ್ಯುತ್ತಮ ಕಾರ್ಯ," ಎಂದು ರಹಾನೆ ಸಹಾಯವಾಣಿ ಸಂಖ್ಯೆಯೊಂದಿಗೆ ಟ್ವೀಟ್ ಮಾಡಿದ್ದಾರೆ.ಕಳೆದ ಮಾರ್ಚ್ 24 ರಿಂದ ದೇಶವು ಲಾಕ್ ಡೌನ್ ಆಗಿದೆ ಮತ್ತು ಕ್ರಿಕೆಟಿಗರು ಸೇರಿದಂತೆ ದೇಶದ ಜನರು ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಒಂದು ವೇಳೆ ಕೊರೊನಾ ವೈರಸ್ ಮಾರಣಾಂತಿಕ ವೈರಸ್ ಇಲ್ಲವಾಗಿದ್ದಲ್ಲಿ ಈಗಾಗಲೇ ವಿಶ್ವದ ಶ್ರೀಮಂತ ಫ್ರಾಂಚೈಸಿ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಟಗಾರರು ಬ್ಯೂಸಿಯಾಗುತ್ತಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 