15ರಂದು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Meritorious students to be felicitated on the 15th

ಚಿಕ್ಕೋಡಿ 12: ಸಂಸದೆ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದಲ್ಲಿ 2024-2025 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಸಾಧಕ ವಿದ್ಯಾರ್ಥಿಗಳಿಗೆ ರವಿವಾರ ದಿ. 15ರಂದು ಮುಂಜಾನೆ 10.30ಕ್ಕೆ ಸತ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ತಿಳಿಸಿದರು. 

ಇಲ್ಲಿನ ಸಂಸದರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಬರುವ ಹತ್ತು ವಿಧಾನಸಭಾ ಕ್ಷೇತ್ರದಿಂದ ಎಸ್‌. ಎಸ್‌. ಎಲ್‌. ಸಿ-50 ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ-50 ವಿದ್ಯಾರ್ಥಿಗಳು ಒಟ್ಟು 100 ವಿದ್ಯಾರ್ಥಿಗಳಿಗೆ ಸಾರ್ವಜನಿಕವಾಗಿ ಅಭಿನಂದನಾ ಪತ್ರ ನೀಡಿ, ಸನ್ಮಾನಿಸಿ, ಗೌರವಿಸಲಾಗುತ್ತದೆ ಎಂದರು.  

ಚಿಕ್ಕೋಡಿ-ಸದಲಗಾ ಶಾಸಕ  ಗಣೇಶ ಪ್ರಕಾಶ ಹುಕ್ಕೇರಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ  ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಸಮಾಜ ಕಲ್ಯಾಣ ಇಲಾಖೆಯ ಬೆಳಗಾವಿ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಎಸ್ ಸಂಪಗಾವಿ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಚಿಕ್ಕೋಡಿ ಉಪನಿರ್ದೇಶಕ ಪಾಂಡುರಂಗ ಈಶ್ವರ ಭಂಡಾರೆ, ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಚಿಕ್ಕೋಡಿ ಉಪನಿರ್ದೇಶಕ  ಆರ್ ಎಸ್ ಸೀತಾರಾಮು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜ ಮಜಲಟ್ಟಿ ಕನ್ನಡ ಉಪನಾಸ್ಯಕ ವಿಶ್ವನಾಥ ಚೌಗಲಾ ಉಪಸ್ಥಿತ ಇರಲಿದ್ದಾರೆ. ಅಧ್ಯಕ್ಷತೆಯನ್ನು ಸಂಸದೆ ಪ್ರಿಯಾಂಕ ಜಾರಕಿಹೊಳಿ ವಹಿಸಲಿದ್ದಾರೆ ಎಂದರು. 

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಪುರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಐ ಕೋರೆ, ಕೆಪಿಸಿಸಿ ಸದಸ್ಯ ರಾಜು ಕೊಟಗಿ, ಸಂಸದರ ಕಚೇರಿ ವ್ಯವಸ್ಥಾಪಕ ರಾಮಕೃಷ್ಣ ಪಾನಬುಡೆ ಮುಂತಾದವರು ಇದ್ದರು.