ಆರೋಗ್ಯ ಸಮತೋಲನಕ್ಕೆ ಹಾಲು ಮತ್ತು ಹಾಲಿನ ಉತ್ಪನ್ನಗಳು ಅವಶ್ಯಕ: ಪ್ರಭುಶಂಕರ
Milk and milk products are essential for balanced health: Prabhu Shankar
ಬಳ್ಳಾರಿ 04: ಮನುಷ್ಯನ ಜೀವನದಲ್ಲಿ ಹಾಲಿನ ಪ್ರಾಮುಖ್ಯತೆ ಅಗತ್ಯವಾಗಿದ್ದು, ಹಾಲಿನಲ್ಲಿರುವ ಕ್ಯಾಲಿಯಂ, ಪ್ರೋಟಿನ್, ವಿಟಮಿನ್-ಬಿ2 ಸೇರಿದಂತೆ ಮುಂತಾದ ಪೋಷಕಾಂಶಗಳು ಮನುಷ್ಯನ ಆರೋಗ್ಯಕ್ಕೆ ಪೂರಕವಾಗಿದೆ ಎಂದು ರಾಬಕೊವಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್.ಪ್ರಭುಶಂಕರ ಅವರು ಹೇಳಿದರು.
ಬುಧವಾರ ನಗರದ ನಂದಿ ಶಾಲೆಯ ಸಭಾಂಗಣದಲ್ಲಿ ಏರಿ್ಡಸಿದ್ದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಆರೋಗ್ಯದ ಸಮತೋಲನಕ್ಕೆ ಬೇಕಾದಅಗತ್ಯ ಪೋಷಕಾಂಶಗಳು ಒಳಗೊಂಡಿದ್ದು, ಆರೋಗ್ಯಕ್ಕೆಉತ್ತಮವಾಗಿವೆ. ಮುಖ್ಯವಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬಗ್ಗೆ ಜಾಗೃತಿ ಮೂಡಿಸುವುದು ಅರಿವುಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ರಾಬಕೊವಿ ಹಾಲು ಒಕ್ಕೂಟದ ವ್ಯವಸ್ಥಾಪಕ (ಮಾ) ಮೋಹನ್ ಎಲ್.ಶಿಂಧೆ ಅವರು ಮಾತನಾಡಿ, ಡೇರಿಉದ್ಯಮಕ್ಕೆ ಸಂಬಂಧಿಸಿದ ಯಾವುದೇರೀತಿಯಲ್ಲಿ ಸಾಧ್ಯವಿರುವ ಉಪಕ್ರಮಗಳ ಬಗ್ಗೆ ಬೆಂಬಲಿಸಲು ಅವಕಾಶ ಒದಗಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಅರಿವು ಕಾರ್ಯಕ್ರಮ ಕುರಿತು ಕ್ವಿಜ್ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಂದಿ ಶಾಲೆಯ ನಿರ್ದೇಶಕ ಕೆ.ಉಮೇರ ಅಹಮ್ಮದ್, ಶಾಲಾ ಪ್ರಾಂಶುಪಾಲರಾದ ಕಕ್ಷನ್ ಜಬೀನ್, ಸಂಯೋಜಕ ಮುನೀರ್ ಶೇಕ್, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವ್ಯವಸ್ಥಾಪಕ (ಡೇರಿ) ಸಿದ್ದರಾಮಪ್ಪ ಶಿವರಾಯ ಕಣ್ಣೂರ, ವ್ಯವಸ್ಥಾಪಕ ಸಹಾಯಕ ವ್ಯವಸ್ಥಾಪಕ (ಮಾ) ಎರಿ್ರಸ್ವಾಮಿರೆಡ್ಡಿ, ಉಪ ವ್ಯವಸ್ಥಾಪಕ (ಗು.ನಿ) ಟಿ.ಮಲ್ಲಿಕಾರ್ಜುನ, ಉಪ ವ್ಯವಸ್ಥಾಪಕ (ಗು.ನಿ) ಟಿ.ಮಲ್ಲಿಕಾರ್ಜುನ, ಪ್ರಭಾರ ಉಪ ವ್ಯವಸ್ಥಾಪಕ (ಖರೀದಿ) ನಾಗರಾಜ ಶರ್ಮಾ, ಮಾರುಕಟ್ಟೆ ಸೂಪರ್ವೈಸರ್ಗಳಾದ ಲೋಹಿತ್ ಕುಮಾರ್, ಎಲ್.ಪ್ರಸನ್ನಕುಮಾರ, ಸಿ.ಎನ್.ಮಂಜುನಾಥ, ಬಾಬು.ಬಿ ಸೇರಿದಂತೆ ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.
ಬಳಿಕ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ನಂದಿನಿ ಸುವಾಸಿತ ಹಾಲು ವಿತರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 