ಸೆ.29 ರಂದು ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಬಳ್ಳಾರಿಗೆ ಆಗಮನ
Minister B.Z. Zameer Ahmed Khan arrives in Ballari on September 29th
ಬಳ್ಳಾರಿ 28 : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಸೆ.29 ರಂದು ಹೊಸಪೇಟೆಯಿಂದ ಬಳ್ಳಾರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 10.30 ಕ್ಕೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡುವರು. ಬಳಿಕ ಮಧ್ಯಾಹ್ನ 12.30 ರಿಂದ 01.30 ಗಂಟೆಯವರೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಏರಿ್ಡಸಿರುವ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲು ಸ್ವೀಕರಿಸುವರು. ನಂತರ ಮಧಾಹ್ನ 02.15 ರಿಂದ ಸಂಜೆ 06 ಗಂಟೆಯವರೆಗೆ ನಗರದ ಜಿಪಂ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆ ನಡೆಸುವರು.
ಬಳಿಕ ಹೊಸಪೇಟೆಗೆ ತೆರಳಿ ವಾಸ್ತವ್ಯ ಮಾಡುವರು.ಸೆ.30 ರಂದು ಮಧ್ಯಾಹ್ನ 03 ಗಂಟೆಗೆ ಹೊಸಪೇಟೆಯಿಂದ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 