ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ಸಚಿವ ಗೋಪಾಲಯ್ಯ
ಬೆಂಗಳೂರು, ಮಾ. 28, ಕೊರೊನ ಹರಡದಂತೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ತಮ್ಮ ಮತಕ್ಷೇತ್ರ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಜನರಿಗೆ ಜಾಗೃತಿ ಮೂಡಿಸಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಕ್ರಿಮಿನಾಶಕಗಳನ್ನು ಸಿಂಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದಲ್ಲದೇ ಖುದ್ದು ಅಧಿಕಾರಿಗಳ ಜೊತೆಗೂಡಿ ಕ್ರಿಮಿನಾಶಕಗಳನ್ನು ಸಿಂಪಡಿಸಿದರು. ನಂತರ ಲಾಕ್ಡೌನ್ ಬಗ್ಗೆ ಮಾಹಿತಿ ವಿವರಣೆ ನೀಡಿ ಜನರು ಹೊರಗೆ ಬಾರದಂತೆ ಪ್ರತಿ ವಾರ್ಡ್ ನ ಜನರಿಗೆ ಜಾಗೃತಿ ಮೂಡಿಸಲು ಆಟೋಗಳಿಗೆ ಚಾಲನೆ ನೀಡಿದರು. ಇನ್ನು ತರಕಾರಿ ಮಂಡಿಗೆ ಭೇಟಿ ನೀಡಿದ ಸಚಿವರು, ವ್ಯಾಪಾರಿಗಳು ಬೆಲೆ ಹೆಚ್ಚಿಸಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ. ತರಕಾರಿಗಳಿಗೆ ಜನ ಸ್ನೇಹಿ ಬೆಲೆ ನಿಗದಿ ಮಾಡಬೇಕು ಎಂದು ತಾಕೀತು ಮಾಡಿದರು.ತರಕಾರಿ ವ್ಯಾಪಾರಕ್ಕೆ ಕಮಲಮ್ಮನ ಗುಂಡಿ ಗ್ರೌಂಡ್, ಶಂಕರ ಮಂಠ ಗ್ರೌಂಡ್, ನಂದಿನಿ ಲೇಔಟ್ ಮೈದಾನವನ್ನು ಬಳಸಿಕೊಳ್ಳಬೇಕು. ಗುಂಪು ಗುಂಪಾಗಿ ಜನ ಸೇರುವುದು ಕಡಿಮೆ ಮಾಡಬೇಕು, ಹೆಚ್ಚಾಗಿ ಜನ ಸೇರಿದರೆ ಅತಿ ವೇಗವಾಗಿ ಕೋರೊನ ಹರಡುವ ಸಾಧ್ಯತೆ ಇದೆ ಎಂದು ತಿಳಿ ಹೇಳಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 