ಅಸುಂಡಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಸಚಿವ ಎಚ್.ಕೆ.ಪಾಟೀಲ ಅವರಿಂದ ಭೂಮಿ ಪೂಜೆ ಕಾರ್ಯಕ್ರಮ
Minister H.K. Patil conducts Bhoomi Puja program for various road works in Asundi village
ಗದಗ 18: ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮೃಗಾಲಯ ಮುಖ್ಯ ರಸ್ತೆಯಿಂದ ರವಿ ಹುಲಕೋಟಿ ಇವರ ಮನೆವರೆಗಿನ ಸಿಸಿ ರಸ್ತೆ ಕಾಮಗಾರಿಯ ಅಂದಾಜು ಮೊತ್ತ 20 ಲಕ್ಷ. ರೂ.. ವೆಚ್ಚದಲ್ಲಿ, ಅಸುಂಡಿ ಕುರ್ತಕೋಟಿ ಗ್ರಾಮದ 36 ಪ್ಲಾಟ್ ಆಶ್ರಯ ಬಡಾವಣೆ ರಸ್ತೆ ಸುಧಾರಣೆ ಕಾಮಗಾರಿ ಅಂದಾಜು ಮೊತ್ತ 10 ಲಕ್ಷ ರೂ ವೆಚ್ಚ , ಅಸುಂಡಿ ಕುರ್ತಕೋಟಿ ಮುಖ್ಯ ರಸ್ತೆಯಿಂದ ರಾಘವೇಂದ್ರ ಹುಲಕೋಟಿ ಇವರ ಹೊಲದವರೆಗೆ ಸುಧಾರಣೆ ( 0.00 ರಿಂದ 6 ಕಿ.ಮೀ) ಅಂದಾಜು ಮೊತ್ತ 15 ಲಕ್ಷ ವೆಚ್ಚ, ಗದಗ ತಾಲೂಕು ಅಸುಂಡಿ ಕುರ್ತಕೋಟಿ ಮುಖ್ಯ ರಸ್ತೆಯಿಂದ ಬೆಳ್ಳಿಕೊಪ್ಪ ಹನುಮಪ್ಪ ದೇವಸ್ಥಾನಕ್ಕೆ ಹೋಗುವ ರಸ್ತೆ ಸುಧಾರಣೆ ( 0.00 ರಿಂದ 6 ಕಿ.ಮೀ ) ಅಂದಾಜು ಮೊತ್ತ 20 ಲಕ್ಷ ಈ ಕಾಮಗಾರಿಗಳಿಗೆ ಸೋಮವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಿದರು. ರಸ್ತೆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಕಾಲಾವಧಿಯಲ್ಲಿಯೇ ಕಾಮಗಾರಿಗಳು ಪೂರ್ಣಗೊಳ್ಳಬೇಕು ಎಂದು ಸಚಿವರು ಹೇಳಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಗಣ್ಯರು, ಹಿರಿಯರು, ಗ್ರಾಮಸ್ಥರು ಹಾಜರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 