ಅಸುಂಡಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಸಚಿವ ಎಚ್.ಕೆ.ಪಾಟೀಲ ಅವರಿಂದ ಭೂಮಿ ಪೂಜೆ ಕಾರ್ಯಕ್ರಮ
Minister H.K. Patil conducts Bhoomi Puja program for various road works in Asundi village
ಗದಗ 18: ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮೃಗಾಲಯ ಮುಖ್ಯ ರಸ್ತೆಯಿಂದ ರವಿ ಹುಲಕೋಟಿ ಇವರ ಮನೆವರೆಗಿನ ಸಿಸಿ ರಸ್ತೆ ಕಾಮಗಾರಿಯ ಅಂದಾಜು ಮೊತ್ತ 20 ಲಕ್ಷ. ರೂ.. ವೆಚ್ಚದಲ್ಲಿ, ಅಸುಂಡಿ ಕುರ್ತಕೋಟಿ ಗ್ರಾಮದ 36 ಪ್ಲಾಟ್ ಆಶ್ರಯ ಬಡಾವಣೆ ರಸ್ತೆ ಸುಧಾರಣೆ ಕಾಮಗಾರಿ ಅಂದಾಜು ಮೊತ್ತ 10 ಲಕ್ಷ ರೂ ವೆಚ್ಚ , ಅಸುಂಡಿ ಕುರ್ತಕೋಟಿ ಮುಖ್ಯ ರಸ್ತೆಯಿಂದ ರಾಘವೇಂದ್ರ ಹುಲಕೋಟಿ ಇವರ ಹೊಲದವರೆಗೆ ಸುಧಾರಣೆ ( 0.00 ರಿಂದ 6 ಕಿ.ಮೀ) ಅಂದಾಜು ಮೊತ್ತ 15 ಲಕ್ಷ ವೆಚ್ಚ, ಗದಗ ತಾಲೂಕು ಅಸುಂಡಿ ಕುರ್ತಕೋಟಿ ಮುಖ್ಯ ರಸ್ತೆಯಿಂದ ಬೆಳ್ಳಿಕೊಪ್ಪ ಹನುಮಪ್ಪ ದೇವಸ್ಥಾನಕ್ಕೆ ಹೋಗುವ ರಸ್ತೆ ಸುಧಾರಣೆ ( 0.00 ರಿಂದ 6 ಕಿ.ಮೀ ) ಅಂದಾಜು ಮೊತ್ತ 20 ಲಕ್ಷ ಈ ಕಾಮಗಾರಿಗಳಿಗೆ ಸೋಮವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಿದರು. ರಸ್ತೆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಕಾಲಾವಧಿಯಲ್ಲಿಯೇ ಕಾಮಗಾರಿಗಳು ಪೂರ್ಣಗೊಳ್ಳಬೇಕು ಎಂದು ಸಚಿವರು ಹೇಳಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಗಣ್ಯರು, ಹಿರಿಯರು, ಗ್ರಾಮಸ್ಥರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 