ಸಚಿವೆ ಹೆಬ್ಬಾಳಕರ್ ಭೇಟಿಯಾದ ಧನಲಕ್ಷ್ಮೀ ಶುಗರ್ಸ್ ನೂತನ ನಿರ್ದೇಶಕರು
Minister Hebbalkar meets new director of Dhanalakshmi Sugars
ಬೆಳಗಾವಿ, 27 : ರಾಮದುರ್ಗ ತಾಲೂಕಿನ ಖಾನಪೇಠ್ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಿರೇರೆಡ್ಡಿ ರೈತಾಪಿ ಪ್ಯಾನಲ್ ನ ಅಭ್ಯರ್ಥಿಗಳು ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪರ್ವತಗೌಡ ಪಾಟೀಲ ನೇತೃತ್ವದ ತಂಡ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ನಿವಾಸಕ್ಕೆ ಭೇಟಿ ನೀಡಿ, ಗೆಲುವಿನ ಸಂಭ್ರಮವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಪ್ಯಾನಲ್ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ ಸಚಿವರು, ಹೊಸ ಆಡಳಿತ ಮಂಡಳಿಯ ಮೂಲಕ ರೈತರ ಹಿತ ಕಾಪಾಡುವಂತೆ ಕಾರ್ಯ ನಿರ್ವಹಿಸಿ ಎಂದು ಶುಭ ಕೋರಿದರು.ಈ ವೇಳೆ ಪರ್ಪಗೌಡ ಪಾಟೀಲ, ಈರಣ್ಣ ಕಾಮಣ್ಣವರ್, ಗೋಪಾಲ್ ಸಂಶಿ, ಬಸವರಾಜ ಹಿರೇರೆಡ್ಡಿ, ಭೀಮಪ್ಪ ಬಸಿಡೋಣಿ, ಬಸವರಾಜ ಸಿದರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 