ಶಿವಮೊಗ್ಗದಲ್ಲಿ ಕೊರೊನಾ ಜಾಗೃತಿಗೆ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ
ಶಿವಮೊಗ್ಗ,
ಮಾ.28, ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜಿಲ್ಲಾ ಉಸ್ತುವಾರಿ
ಸಚಿವರಿಗೆ ಜಿಲ್ಲೆಯ ಕೊರೊನಾ ತಡೆ ಜಾಗೃತಿ ಜವಾಬ್ದಾರಿ ವಹಿಸಿದ್ದು, ಮುಖ್ಯಮಂತ್ರಿ
ಬಿ.ಎಸ್.ಯಡಿಯೂರಪ್ಪ ಅವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ
ಕೆ.ಎಸ್.ಈಶ್ವರಪ್ಪ ಸ್ಥಳೀಯ ಶಾಸಕರು, ಸಂಸದರು ಹಾಗೂ ಮೇಲ್ಮನೆಯ ಸದಸ್ಯರ ಜೊತೆ ಇಂದು
ಸಭೆ ನಡೆಸಿದರು.ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಸದ
ಬಿ.ವೈ ರಾಘವೇಂದ್ರ, ಶಾಸಕರಾದ ಅರಗಜ್ಞಾನೇಂದ್ರ, ಹರತಾಳ ಹಾಲಪ್ಪ, ಅಶೋಕ್ ನಾಯ್ಕ್
ಹಾಗೂ ವಿಧಾನಪರಿಷತ್ತು ಸದಸ್ಯರಾದ ಆಯನೂರು ಮಂಜುನಾಥ, ರುದ್ರೇಗೌಡ, ಪ್ರಸನ್ನ ಕುಮಾರ್
ಉಪಸ್ಥಿತರಿದ್ದರು.ಸಭೆಯಲ್ಲಿ ತರಕಾರಿ, ದಿನಸಿ ವಸ್ತುಗಳನ್ನು ಎಲ್ಲರಿಗೂ
ಸಮರ್ಪಕವಾಗಿ ವಿತರಣೆಯಾಗಬೇಕು. ಪೌರ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್ ಆಹಾರ
ದೊರೆಯಬೇಕು ಹಾಗೂ ಎಲ್ಲಾ ಮಹಾನಗರಪಾಲಿಕೆ ವಾರ್ಡ್ಗಳಿಗೆ ಔಷಧಿ ಕ್ರಿಮಿನಾಶಕ ಸಿಂಪಡನೆ
ಮಾಡಬೇಕು ಎಂದು ಅಧಿಕಾರಿಗಳಿಗೆ ಶಾಸಕರಿಗೆ ಸೂಚಿಸಲಾಯಿತು.ಸಮಾಜಘಾತುಕ ಶಕ್ತಿಗಳು
ಹಾಗೂ ಅಕ್ರಮ ಮರಳುಗಾರಿಕೆ ಮತ್ತು ಅರಣ್ಯ ಅಕ್ರಮ ನಾಟಾ ಸಾಗಾಣಿಕೆಯನ್ನು ಗಂಭೀರವಾಗಿ
ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆಯೂ ಚರ್ಚಿಸಲಾಯಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 