ಶಿವಮೊಗ್ಗದಲ್ಲಿ ಕೊರೊನಾ ಜಾಗೃತಿಗೆ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ
ಶಿವಮೊಗ್ಗ,
ಮಾ.28, ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜಿಲ್ಲಾ ಉಸ್ತುವಾರಿ
ಸಚಿವರಿಗೆ ಜಿಲ್ಲೆಯ ಕೊರೊನಾ ತಡೆ ಜಾಗೃತಿ ಜವಾಬ್ದಾರಿ ವಹಿಸಿದ್ದು, ಮುಖ್ಯಮಂತ್ರಿ
ಬಿ.ಎಸ್.ಯಡಿಯೂರಪ್ಪ ಅವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ
ಕೆ.ಎಸ್.ಈಶ್ವರಪ್ಪ ಸ್ಥಳೀಯ ಶಾಸಕರು, ಸಂಸದರು ಹಾಗೂ ಮೇಲ್ಮನೆಯ ಸದಸ್ಯರ ಜೊತೆ ಇಂದು
ಸಭೆ ನಡೆಸಿದರು.ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಸದ
ಬಿ.ವೈ ರಾಘವೇಂದ್ರ, ಶಾಸಕರಾದ ಅರಗಜ್ಞಾನೇಂದ್ರ, ಹರತಾಳ ಹಾಲಪ್ಪ, ಅಶೋಕ್ ನಾಯ್ಕ್
ಹಾಗೂ ವಿಧಾನಪರಿಷತ್ತು ಸದಸ್ಯರಾದ ಆಯನೂರು ಮಂಜುನಾಥ, ರುದ್ರೇಗೌಡ, ಪ್ರಸನ್ನ ಕುಮಾರ್
ಉಪಸ್ಥಿತರಿದ್ದರು.ಸಭೆಯಲ್ಲಿ ತರಕಾರಿ, ದಿನಸಿ ವಸ್ತುಗಳನ್ನು ಎಲ್ಲರಿಗೂ
ಸಮರ್ಪಕವಾಗಿ ವಿತರಣೆಯಾಗಬೇಕು. ಪೌರ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್ ಆಹಾರ
ದೊರೆಯಬೇಕು ಹಾಗೂ ಎಲ್ಲಾ ಮಹಾನಗರಪಾಲಿಕೆ ವಾರ್ಡ್ಗಳಿಗೆ ಔಷಧಿ ಕ್ರಿಮಿನಾಶಕ ಸಿಂಪಡನೆ
ಮಾಡಬೇಕು ಎಂದು ಅಧಿಕಾರಿಗಳಿಗೆ ಶಾಸಕರಿಗೆ ಸೂಚಿಸಲಾಯಿತು.ಸಮಾಜಘಾತುಕ ಶಕ್ತಿಗಳು
ಹಾಗೂ ಅಕ್ರಮ ಮರಳುಗಾರಿಕೆ ಮತ್ತು ಅರಣ್ಯ ಅಕ್ರಮ ನಾಟಾ ಸಾಗಾಣಿಕೆಯನ್ನು ಗಂಭೀರವಾಗಿ
ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆಯೂ ಚರ್ಚಿಸಲಾಯಿತು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 