ನಗರದ ಆನಂದ ಮಹಲಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ : ಅಭಿವೃದ್ದಿ ಕಾರ್ಯಗಳ ಕುರಿತು ಪರೀಶೀಲನೆ
Minister Krishnabhairegowda visit to Ananda Mahal in the city: review of development works
ವಿಜಯಪುರ 12: ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ನಗರದ ಆನಂದ ಮಹಲ್ಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಶನಿವಾರ ಬೆಳಿಗ್ಗೆ ಐತಿಹಾಸಿಕ ಆನಂದ ಮಹಲ್ಗೆ ಭೇಟಿ ನೀಡಿ ಕಟ್ಟಡವನ್ನು ಸಮಗ್ರವಾಗಿ ವೀಕ್ಷಣೆ ಮಾಡಿದ ಅವರು, ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಉಪಯೋಗ ಮಾಡಿಕೊಳ್ಳುವುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಅಮೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 